
ಇಟಾನಗರ (ಅರುಣಾಚಲ ಪ್ರದೇಶ) – ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯನ್ನು ಮರುಸ್ಥಾಪಿಸುವ ಸುಳಿವು ನೀಡಿದ್ದಾರೆ. ‘ಈ ಕಾಯಿದೆಯ ಜಾರಿಯಿಂದ ಅರುಣಾಚಲ ಪ್ರದೇಶದ ಸಂಸ್ಕೃತಿಯನ್ನು ಕಾಪಾಡಲು ಸಹಾಯವಾಗುವುದು’, ಎಂದು ಹೇಳಿದ್ದಾರೆ. ಈ ಕಾಯಿದೆಯನ್ನು 1978 ರಲ್ಲಿ ಮಾಡಲಾಗಿತ್ತು, ಅದು ಇಲ್ಲಿಯವರೆಗೂ ಜಾರಿಗೆ ಬಂದಿಲ್ಲ. ಬಲವಂತವಾಗಿ ಅಥವಾ ಆಮಿಷ ಇತ್ಯಾದಿಗಳ ಮೂಲಕ ಯಾವುದೇ ಪ್ರಕಾರದ ಮತಾಂತರದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವುದಕ್ಕಾಗಿ ಈ ಕಾಯಿದೆಯನ್ನು ಮಾಡಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಈ ಕಾಯಿದೆ ಮಾಡಿದಾಗ ಅಲ್ಲಿ ಕ್ರೈಸ್ತ ಮಿಷನರಿಗಳು ಸಾಕಷ್ಟು ಕ್ರಿಯಾಶೀಲರಾಗಿದ್ದರು. ಜನರನ್ನು ಕ್ರೈಸ್ತರನ್ನಾಗಿ ಮಾಡಲು ದೊಡ್ಡ ಪಿತೂರಿಯಿತ್ತು; ಆದರೆ ಇದನ್ನು ತಡೆಯಲು ವಿಧಾನಸಭೆಯಲ್ಲಿ ಈ ಕಾನೂನು ಜಾರಿಗೆ ಬಂದರೂ 47 ವರ್ಷಗಳಿಂದ ಅದರ ಕಾರ್ಯಾಚರಣೆ ಆಗಿಲ್ಲ’, ಎಂದರು.
ಸಂಪಾದಕೀಯ ನಿಲುವು47 ವರ್ಷಗಳಿಂದ ಕಾನೂನು ಜಾರಿಯಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಕಾರಣರಾದವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತಾರೆ, ಇದನ್ನು ತಿಳಿಸಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ