
ಇಟಾನಗರ (ಅರುಣಾಚಲ ಪ್ರದೇಶ) – ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಾಂಡು ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯನ್ನು ಮರುಸ್ಥಾಪಿಸುವ ಸುಳಿವು ನೀಡಿದ್ದಾರೆ. ‘ಈ ಕಾಯಿದೆಯ ಜಾರಿಯಿಂದ ಅರುಣಾಚಲ ಪ್ರದೇಶದ ಸಂಸ್ಕೃತಿಯನ್ನು ಕಾಪಾಡಲು ಸಹಾಯವಾಗುವುದು’, ಎಂದು ಹೇಳಿದ್ದಾರೆ. ಈ ಕಾಯಿದೆಯನ್ನು 1978 ರಲ್ಲಿ ಮಾಡಲಾಗಿತ್ತು, ಅದು ಇಲ್ಲಿಯವರೆಗೂ ಜಾರಿಗೆ ಬಂದಿಲ್ಲ. ಬಲವಂತವಾಗಿ ಅಥವಾ ಆಮಿಷ ಇತ್ಯಾದಿಗಳ ಮೂಲಕ ಯಾವುದೇ ಪ್ರಕಾರದ ಮತಾಂತರದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳುವುದಕ್ಕಾಗಿ ಈ ಕಾಯಿದೆಯನ್ನು ಮಾಡಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಈ ಕಾಯಿದೆ ಮಾಡಿದಾಗ ಅಲ್ಲಿ ಕ್ರೈಸ್ತ ಮಿಷನರಿಗಳು ಸಾಕಷ್ಟು ಕ್ರಿಯಾಶೀಲರಾಗಿದ್ದರು. ಜನರನ್ನು ಕ್ರೈಸ್ತರನ್ನಾಗಿ ಮಾಡಲು ದೊಡ್ಡ ಪಿತೂರಿಯಿತ್ತು; ಆದರೆ ಇದನ್ನು ತಡೆಯಲು ವಿಧಾನಸಭೆಯಲ್ಲಿ ಈ ಕಾನೂನು ಜಾರಿಗೆ ಬಂದರೂ 47 ವರ್ಷಗಳಿಂದ ಅದರ ಕಾರ್ಯಾಚರಣೆ ಆಗಿಲ್ಲ’, ಎಂದರು.
ಸಂಪಾದಕೀಯ ನಿಲುವು47 ವರ್ಷಗಳಿಂದ ಕಾನೂನು ಜಾರಿಯಾಗದಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ಕಾರಣರಾದವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತಾರೆ, ಇದನ್ನು ತಿಳಿಸಬೇಕು ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”