ಪ್ರಧಾನಿ ನರೇಂದ್ರ ಮೋದಿ ಇವರಿಂದ ಶಂಕುಸ್ಥಾಪನೆ

ನವದೆಹಲಿ – ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 3 ರಂದು ವೀರ್ ಸಾವರ್ಕರ್ ಮಹಾವಿದ್ಯಾಲಯದ ಶಂಕುಸ್ಥಾಪನೆ ನೆರವೇರಿಸಿದರು. ದೆಹಲಿಯ ನಜಫ್ಗಡದಲ್ಲಿ ಈ ಮಹಾವಿದ್ಯಾಲಯ ನಿರ್ಮಾಣ ಆಗುತ್ತಿದೆ. ಇದು ದೆಹಲಿ ವಿಶ್ವವಿದ್ಯಾಲಯದ ಸಂಯೋಜಿತವಾಗಿರುತ್ತದೆ. 30 ವರ್ಷಗಳ ನಂತರ ದೆಹಲಿ ವಿಶ್ವವಿದ್ಯಾಲಯಕ್ಕೆ ಹೊಸ ಮಹಾವಿದ್ಯಾಲಯ ಸಿಗಲಿದೆ. 140 ಕೋಟಿ ವೆಚ್ಚದಲ್ಲಿ ವೀರ ಸಾವರ್ಕರ್ ಮಹಾವಿದ್ಯಾಲಯ ನಿರ್ಮಾಣವಾಗಲಿದೆ. ಈ ಮಹಾವಿದ್ಯಾಲಯ 18 ಸಾವಿರ ಚದರ ಮೀಟರ್ಗಿಂತಲೂ ಅಧಿಕ ಪ್ರದೇಶದಲ್ಲಿ ಹರಡಿಕೊಂಡಿದ್ದು, ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ. ಕಾಲೇಜಿನಲ್ಲಿ 24 ತರಗತಿ ಕೊಠಡಿಗಳು ಮತ್ತು 8 ಟ್ಯುಟೋರಿಯಲ್ ಕೊಠಡಿಗಳನ್ನು((ಇಂತಹ ಕೊಠಡಿಗಳಲ್ಲಿ ಸಣ್ಣ ಗುಂಪು ಮಾಡಿ ಒಂದೇ ವಿಷಯದ ಬಗ್ಗೆ ಚರ್ಚೆ ನಡೆಸಲಾಗುವುದು) ಹೊಂದಿರುತ್ತದೆ. ಈ ಮಹಾವಿದ್ಯಾಲಯದಲ್ಲಿ ಗ್ರಂಥಾಲಯ, ಕ್ಯಾಂಟೀನ್ ಮತ್ತು ಶಿಕ್ಷಕರಿಗಾಗಿ 40 ಕೊಠಡಿಗಳು ಇರುತ್ತವೆ.
ಸಂಪಾದಕೀಯ ನಿಲುವುಕೇಂದ್ರ ಸರಕಾರದ ಶ್ಲಾಘನೀಯ ನಿರ್ಧಾರ ! ಅಂತಹ ಮಹಾವಿದ್ಯಾಲಯಗಳಲ್ಲಿ ರಾಷ್ಟ್ರ ಮತ್ತು ಹಿಂದೂ ಧರ್ಮದ ಶಿಕ್ಷಣವೂ ಸಿಗಬೇಕು, ಎಂದು ಹಿಂದೂಗಳು ಅಪೇಕ್ಷಿಸುತ್ತಾರೆ ! |
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir