ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವರು !

ಪ್ರಯಾಗರಾಜ್ – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಸಂಗಮ ಕ್ಷೇತ್ರದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಜನವರಿ 16 ಅಥವಾ 21 ರಂದು ನಡೆಯಲಿದೆ. ಆ ಸಮಯದಲ್ಲಿ, ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಗಂಗಾ ನದಿಗೆ ಹೆತಾಪಟ್ಟಿಯಿಂದ ದಾರಾಗಂಜ್ ನಡುವೆ ಇರುವ ಪ್ರಸ್ತಾವಿತ ಸೇತುವೆಯ ಸ್ಥಳದಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ. ಈ ಸ್ಥಳವನ್ನು ಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ. ಈ ಪ್ರಸ್ತಾವಿತ ಸೇತುವೆ ನಿರ್ಮಾಣಕ್ಕಾಗಿ 750 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ಈ ಯೋಜನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯುವ ಸಾಧ್ಯತೆಯಿದೆ.
2019 ರಲ್ಲಿ ನಡೆದ ಅರ್ಧ ಕುಂಭ ಮೇಳದ ಕಾಲಾವಧಿಯಲ್ಲಿ ಸಂಗಮ ಕ್ಷೇತ್ರದಲ್ಲಿ ಇದೇ ರೀತಿಯ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಆ ಸಭೆಯಲ್ಲಿ ಗಂಗಾ ಹೆದ್ದಾರಿ ಯೋಜನೆಗೆ ಅನುಮೋದನೆ ನೀಡಲಾಗಿತ್ತು.
ಸಂಗಮದ ಬಳಿ ಸಾಂಕೇತಿಕ ರಾಮಸೇತು ನಿರ್ಮಾಣ !
ಯಮುನಾ ನದಿಯಲ್ಲಿ ಬೋಟ್ ಕ್ಲಬ್ ನಿಂದ ಅರೈಲ್ ನಡುವೆ ಸಾಂಕೇತಿಕ ರಾಮಸೇತುವನ್ನು ನಿರ್ಮಿಸಲಾಗುತ್ತಿದ್ದು, ಈ ಯೋಜನೆಗೆ ಅನುಮೋದನೆ ದೊರೆಯುವ ಸಾಧ್ಯತೆಯಿದೆ. ಪ್ರಯಾಗರಾಜ ಮಹಾಪೌರರು ಈ ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಿದ್ದಾರೆ.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!