
ಕೊಯಮತ್ತೂರು (ತಮಿಳುನಾಡು) – ರಾಜ್ಯದ ಉಗ್ರ ನಿಗ್ರಹ ದಳ (ಎಟಿಎಸ್) ತಿರುಪ್ಪೂರು ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲಿ ನಡೆಸಿದ ಅನಿರೀಕ್ಷಿತ ದಾಳಿಯಲ್ಲಿ 31 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಿದೆ. ಈ ನುಸುಳುಕೋರರು ತಿರುಪ್ಪೂರು ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲಿ ಬಹಳ ದಿನಗಳಿಂದ ವಾಸಿಸುತ್ತಿದ್ದರು. ಈ ಜನರು ಬಂಗಾಳದ ಮೂಲಕ ಭಾರತಕ್ಕೆ ಪ್ರವೇಶಿಸಿ ನಂತರ ತಿರುಪ್ಪೂರು ಮತ್ತು ಕೊಯಮತ್ತೂರು ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ದಾಖಲೆಗಳನ್ನು ತಯಾರಿಸಿಕೊಂಡು ವಾಸಿಸುತ್ತಿದ್ದರು, ಎಂದು ತನಿಖೆಯಿಂದ ತಿಳಿದುಬಂದಿದೆ. ಬಂಧಿತ ಈ ನುಸುಳುಕೋರರನ್ನು ಪಲ್ಲದಂ ಮತ್ತು ತಿರುಪ್ಪೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
1. ಅಸ್ಸಾಂ ಮುಖ್ಯಮಂತ್ರಿ ಇತ್ತೀಚೆಗೆ ಅನೇಕ ಬಾಂಗ್ಲಾದೇಶಿ ನುಸುಳುಕೋರರು ಇಲ್ಲಿ ಅಡಗಿಕೊಂಡಿದ್ದಾರೆ ಮತ್ತು ತಮಿಳುನಾಡು ಪೊಲೀಸರು ಅವರ ತನಿಖೆ ಮಾಡಬೇಕು’, ಎಂದು ಹೇಳಿಕೆ ನೀಡಿದ್ದರು. ಇದರ ನಂತರ, ತಮಿಳುನಾಡು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. (ಅಸ್ಸಾಂ ಮುಖ್ಯಮಂತ್ರಿಗಳು ಈ ವಿಷಯವನ್ನು ಅವರ ಗಮನಕ್ಕೆ ತಂದ ನಂತರ, ಪೊಲೀಸರು ನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿದರು; ಹಾಗಾದರೆ ತಮಿಳುನಾಡು ಸರಕಾರ ಏನು ಮಾಡುತ್ತಿದೆ, ಎಂದು ಸಾಮಾನ್ಯ ಪ್ರಜೆಗಳು ಕೇಳಿದರೆ, ಅದರಲ್ಲಿ ಏನು ತಪ್ಪು ? – ಸಂಪಾದಕರು)
2. ಜನವರಿ 11 ರಂದು, ತ್ರಿಪುರಾ ರಾಜ್ಯದ ಖೋವಯಿ ಜಿಲ್ಲೆಯಲ್ಲಿ ಗಡಿ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 3 ಬಾಂಗ್ಲಾದೇಶಿ ಪ್ರಜೆಗಳನ್ನು ಭದ್ರತಾ ಪಡೆ ಸೈನಿಕರು ಬಂಧಿಸಿದರು.
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!