
ಕೊಯಮತ್ತೂರು (ತಮಿಳುನಾಡು) – ರಾಜ್ಯದ ಉಗ್ರ ನಿಗ್ರಹ ದಳ (ಎಟಿಎಸ್) ತಿರುಪ್ಪೂರು ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲಿ ನಡೆಸಿದ ಅನಿರೀಕ್ಷಿತ ದಾಳಿಯಲ್ಲಿ 31 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಿದೆ. ಈ ನುಸುಳುಕೋರರು ತಿರುಪ್ಪೂರು ಮತ್ತು ಕೊಯಮತ್ತೂರು ಜಿಲ್ಲೆಗಳಲ್ಲಿ ಬಹಳ ದಿನಗಳಿಂದ ವಾಸಿಸುತ್ತಿದ್ದರು. ಈ ಜನರು ಬಂಗಾಳದ ಮೂಲಕ ಭಾರತಕ್ಕೆ ಪ್ರವೇಶಿಸಿ ನಂತರ ತಿರುಪ್ಪೂರು ಮತ್ತು ಕೊಯಮತ್ತೂರು ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ದಾಖಲೆಗಳನ್ನು ತಯಾರಿಸಿಕೊಂಡು ವಾಸಿಸುತ್ತಿದ್ದರು, ಎಂದು ತನಿಖೆಯಿಂದ ತಿಳಿದುಬಂದಿದೆ. ಬಂಧಿತ ಈ ನುಸುಳುಕೋರರನ್ನು ಪಲ್ಲದಂ ಮತ್ತು ತಿರುಪ್ಪೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
1. ಅಸ್ಸಾಂ ಮುಖ್ಯಮಂತ್ರಿ ಇತ್ತೀಚೆಗೆ ಅನೇಕ ಬಾಂಗ್ಲಾದೇಶಿ ನುಸುಳುಕೋರರು ಇಲ್ಲಿ ಅಡಗಿಕೊಂಡಿದ್ದಾರೆ ಮತ್ತು ತಮಿಳುನಾಡು ಪೊಲೀಸರು ಅವರ ತನಿಖೆ ಮಾಡಬೇಕು’, ಎಂದು ಹೇಳಿಕೆ ನೀಡಿದ್ದರು. ಇದರ ನಂತರ, ತಮಿಳುನಾಡು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. (ಅಸ್ಸಾಂ ಮುಖ್ಯಮಂತ್ರಿಗಳು ಈ ವಿಷಯವನ್ನು ಅವರ ಗಮನಕ್ಕೆ ತಂದ ನಂತರ, ಪೊಲೀಸರು ನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾರಂಭಿಸಿದರು; ಹಾಗಾದರೆ ತಮಿಳುನಾಡು ಸರಕಾರ ಏನು ಮಾಡುತ್ತಿದೆ, ಎಂದು ಸಾಮಾನ್ಯ ಪ್ರಜೆಗಳು ಕೇಳಿದರೆ, ಅದರಲ್ಲಿ ಏನು ತಪ್ಪು ? – ಸಂಪಾದಕರು)
2. ಜನವರಿ 11 ರಂದು, ತ್ರಿಪುರಾ ರಾಜ್ಯದ ಖೋವಯಿ ಜಿಲ್ಲೆಯಲ್ಲಿ ಗಡಿ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ 3 ಬಾಂಗ್ಲಾದೇಶಿ ಪ್ರಜೆಗಳನ್ನು ಭದ್ರತಾ ಪಡೆ ಸೈನಿಕರು ಬಂಧಿಸಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !