|

ಪ್ರಯಾಗರಾಜ್ – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಸಂಪುಟದ ಬಹುತೇಕ ಎಲ್ಲಾ ಸಚಿವರು ಜನವರಿ 22 ರಂದು ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದರು. ಅದಾದ ನಂತರ, ಮುಖ್ಯಮಂತ್ರಿಗಳು ಗಂಗಾ ಪೂಜೆ ನೆರವೇರಿಸಿ ಗಂಗಾ ನದಿಯ ಆರತಿಯನ್ನು ನೆರವೇರಿಸಿದರು.

ಬೆಳಿಗ್ಗೆ ಸಂಗಮಕ್ಷೇತ್ರದಲ್ಲಿ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಂಗಮಕ್ಷೇತ್ರದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಸಚಿವ ಸಂಪುಟ ಸಭೆ ಇದಾಗಿದೆ. ಇದಕ್ಕೂ ಮೊದಲು, 2019 ರ ಅರ್ಧ ಕುಂಭ ಮೇಳದಲ್ಲಿ, ಸಂಗಮಕ್ಷೇತ್ರದಲ್ಲಿ ಸಚಿವ ಸಂಪುಟ ಸಭೆಯೂ ನಡೆದಿತ್ತು. ಈ ಸಭೆಯಲ್ಲಿ, ಅವರು ವ್ಯವಹಾರ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಹಲವಾರು ನೀತಿ ನಿರ್ಧಾರಗಳನ್ನು ತೆಗೆದುಕೊಂಡರು. ಇದರೊಂದಿಗೆ ಯೋಗಿ ಆದಿತ್ಯನಾಥ್ ಸರಕಾರದ ಮಹತ್ವಾಕಾಂಕ್ಷೆಯ ‘ಗಂಗಾ ಎಕ್ಸ್ಪ್ರೆಸ್ವೇ’ ಯೋಜನೆಗೆ ಹಸಿರು ನಿಶಾನೆ ತೋರಿಸಲಾಯಿತು. ಈ ಹೆದ್ದಾರಿಯನ್ನು ಪ್ರಯಾಗರಾಜ್ನಿಂದ ಮಿರ್ಜಾಪುರ, ಭದೋಹಿ, ವಾರಣಾಸಿ, ಚಂದೌಲಿ ಮೂಲಕ ಘಾಜಿಪುರಕ್ಕೆ ನಿರ್ಮಿಸಲಾಗುವುದು. ನಂತರ ಅದನ್ನು ಪೂರ್ವಾಂಚಲ್ ಎಕ್ಸ್ಪ್ರೆಸ್ವೇಗೆ ಸಂಪರ್ಕಿಸಲಾಗುತ್ತದೆ. ಇದು ಉತ್ತರ ಪ್ರದೇಶ ರಾಜ್ಯದ ಪೂರ್ವ ಮತ್ತು ಪಶ್ಚಿಮ ಭಾಗಗಳ ನಡುವಿನ ಸಂಪರ್ಕವನ್ನು ಬಲಪಡಿಸುತ್ತದೆ ಮತ್ತು ರಾಜ್ಯದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಸಭೆಯಲ್ಲಿ ವ್ಯಕ್ತವಾಯಿತು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!