ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ್, ಜನವರಿ 23 (ಸುದ್ದಿ) – ಪ್ರಯಾಗರಾಜ್ ಕುಂಭನಗರಿಯ ಕೇಂದ್ರೀಯ ಆಸ್ಪತ್ರೆಯಲ್ಲಿ ಇದುವರೆಗೆ 2 ಲಕ್ಷಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದಿದ್ದಾರೆ. ಈ ಆಸ್ಪತ್ರೆಯಲ್ಲಿ ಒಟ್ಟು 1 ಸಾವಿರದ 200ಕ್ಕೂ ಹೆಚ್ಚು ರೋಗಿಗಳು ದಾಖಲಾಗಿದ್ದರು. ಇದುವರೆಗೆ ಒಟ್ಟು 750 ಸಾಮಾನ್ಯ ಶಸ್ತ್ರಚಿಕಿತ್ಸೆಗಳು, ‘ಆಯುಷ್ಮಾನ್ ಭಾರತ್ ಯೋಜನೆ’ಯ ಅಡಿಯಲ್ಲಿ 42 ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿದೆ. 68ಕ್ಕೂ ಹೆಚ್ಚು ರೋಗಿಗಳು ಹೃದ್ರೋಗಕ್ಕೆ ಚಿಕಿತ್ಸೆ ಪಡೆದಿದ್ದಾರೆ ಎಂದು ಕೇಂದ್ರೀಯ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ಮನೋಜ ಕೌಶಿಕ್ ಅವರು ‘ಸನಾತನ ಪ್ರಭಾತ’ದ ಪ್ರತಿನಿಧಿಗೆ ಮಾಹಿತಿ ನೀಡಿದರು. ಅನೇಕ ಸಾಧುಗಳು ಸಹ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಮತ್ತು ಅವರನ್ನು ಚಿಕಿತ್ಸೆ ನಂತರ ಅವರ ಮಂಟಪ ಕಳುಹಿಸಲಾಗಿದೆ.
ಮೌನಿ ಅಮವಾಸ್ಯೆಯ ಸಿದ್ಧತೆಯ ಬಗ್ಗೆ ಡಾ. ಕೌಶಿಕ್ ಮಾತನಾಡಿ, ಈ ಸಂದರ್ಭದಲ್ಲಿ 2-2 ವೈದ್ಯರುಗಳ ಒಂದು ತಂಡ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಯಾವುದೇ ವೈದ್ಯರಿಗೂ ರಜೆ ನೀಡುವುದಿಲ್ಲ. ಎಲ್ಲಾ ತಜ್ಞ ವೈದ್ಯರು ಇಲ್ಲಿಯೇ ಕಾರ್ಯನಿರ್ವಹಿಸಲಿದ್ದಾರೆ. ನಮ್ಮ ಕಡೆಯಿಂದ ಒಂದು ವೇಳೆ ಕೆಲವು ಕಾರಣಗಳಿಗಾಗಿ ವೈದ್ಯರಿಗೆ ರಜೆ ಘೋಷಿಸಿದಾಗ ಮಾತ್ರ ವೈದ್ಯರು ಪ್ರಧಾನ ಕಚೇರಿಯನ್ನು ಬಿಡಬಹುದು ಎಂದು ತಿಳಿಸಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ