ವಿಶ್ವವಿದ್ಯಾಲಯದ ಮೂಲಕ, ಭಾರತೀಯ ಯುವಕರು ಜಾಗತಿಕ ಆರ್ಥವ್ಯವಸ್ಥೆಯ ನೇತೃತ್ವ ವಹಿಸಲು ತಯಾರಾಗುವರು !

ಮುಂಬಯಿ – ದೇಶದ ಮೊದಲ ‘AI’ (ಕೃತಕ ಬುದ್ಧಿಮತ್ತೆ) ವಿಶ್ವವಿದ್ಯಾಲಯವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸಲಾಗುವುದು, ಎಂದು ರಾಜ್ಯದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಆಶಿಷ ಶೆಲಾರ್ ಘೋಷಿಸಿದ್ದಾರೆ.
ಅವರು,
1. ‘ಅಭಿವೃದ್ಧಿ ಹೊಂದಿದ ಭಾರತ 2047 ಮಿಷನ್’ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಮತ್ತು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಭಾರತದ ಪ್ರಯಾಣದಲ್ಲಿ ಶಿಕ್ಷಣ ಮತ್ತು ತಂತ್ರಜ್ಞಾನವು ನಿರ್ಣಾಯಕ ಪಾತ್ರ ವಹಿಸುತ್ತದೆ. ಆದ್ದರಿಂದ, ದೇಶದ ಮೊದಲ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸಲಾಗುವುದು.
2. ಮಹಾರಾಷ್ಟ್ರ ಸರಕಾರವು ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ನಿರ್ಧಾರವನ್ನು ಐತಿಹಾಸಿಕ ನಿರ್ಧಾರವಾಗಲಿದೆ.
3. ಈ ಯೋಜನೆಯನ್ನು ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಚಂದ್ರಕಾಂತ ಪಾಟೀಲ್ ನೇತೃತ್ವದ ಸಚಿವಾಲಯದ ಸಹಯೋಗದೊಂದಿಗೆ ಕಾರ್ಯಗತಗೊಳಿಸಲಾಗುವುದು. ಈ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳು ಮತ್ತು ಯುವಕರನ್ನು ಉದ್ಯಮ ಮತ್ತು ಆಧುನಿಕ ತಂತ್ರಜ್ಞಾನದ ಪ್ರಗತಿಯಿಂದ ನಡೆಸಲ್ಪಡುವ ತಾಂತ್ರಿಕ ಕ್ರಾಂತಿಗೆ ಅಗತ್ಯವಾದ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸುತ್ತದೆ.
4. ಈ ವಿಶ್ವವಿದ್ಯಾಲಯಕ್ಕಾಗಿ ವಿಶೇಷ ‘ಕಾರ್ಯಪಡೆ’ಯನ್ನು ಸ್ಥಾಪಿಸಲಾಗಿದೆ. ಈ ನೀತಿಯ ನೀಲನಕ್ಷೆಯನ್ನು ಮಾಹಿತಿ ತಂತ್ರಜ್ಞಾನ ಸಚಿವ ಆಶಿಷ ಶೆಲಾರ್ ಅವರ ನೇತೃತ್ವದಲ್ಲಿ ಅಂತಿಮಗೊಳಿಸಲಾಗುವುದು.
5. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಾರಾಷ್ಟ್ರ ಮುಂಚೂಣಿಯಲ್ಲಿರಲಿದೆ. ನಮ್ಮ ಸರಕಾರವು ತಂತ್ರಜ್ಞಾನದ ಸಹಾಯದಿಂದ ಶಿಕ್ಷಣವನ್ನು ಪರಿವರ್ತಿಸಲು ಬದ್ಧವಾಗಿದೆ, ಇದರಿಂದಾಗಿ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಸೃಷ್ಟಿಸಲು ಮತ್ತು ನಾವೀನ್ಯತೆಗೆ ಅವಕಾಶಗಳನ್ನು ಸೃಷ್ಟಿಸಲು, ಆ ಮೂಲಕ ಭವಿಷ್ಯಕ್ಕಾಗಿ ಕೌಶಲ್ಯಪೂರ್ಣ ಕಾರ್ಯಪಡೆಯನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.
6. ಮಹಾಮೈತ್ರಿ ಸರಕಾರದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ, ಈ ವಿಶ್ವವಿದ್ಯಾಲಯವು ಅತ್ಯಾಧುನಿಕ ಸಂಶೋಧನೆ ಮತ್ತು ಕೌಶಲ್ಯ ಅಭಿವೃದ್ಧಿಯ ಕೇಂದ್ರವಾಗಲಿದೆ. ಈ ವಿಶ್ವವಿದ್ಯಾಲಯವು ಭಾರತೀಯ ಯುವಕರನ್ನು ಕೃತಕ ಬುದ್ಧಿಮತ್ತೆ ಆಧಾರಿತ ಜಾಗತಿಕ ಆರ್ಥಿಕತೆಯಲ್ಲಿ ಮುನ್ನಡೆಸಲು ಸಜ್ಜುಗೊಳಿಸುತ್ತದೆ.
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!