ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ್, ಜನವರಿ 28 (ಸುದ್ದಿ) – ಸನಾತನ ಧರ್ಮವು ಅನಾದಿ ಕಾಲದಿಂದಲೂ ನಡೆಯುತ್ತಿದೆ. ಈ ಸನಾತನ ಧರ್ಮಕ್ಕೆ ದಿಕ್ಕು ನೀಡಲು ಸನಾತನ ಸಂಸ್ಥೆಯು ಗಮನಾರ್ಹ ಕಾರ್ಯ ಮಾಡುತ್ತಿದೆ. ಸನಾತನ ಸಂಸ್ಥೆಗೆ ಸಹಾಯ ಮಾಡಲು ನಾವು ಯಾವಾಗಲೂ ಸಿದ್ಧರಿದ್ದೇವೆ ಎಂದು ಮಹಾರಾಷ್ಟ್ರದ ಶ್ರೀ ಚೈತನ್ಯ ಸೇವಾ ಧಾಮ್ ಕನ್ನಡದ ಶ್ರೀ ಆನಂದ ಚೈತನ್ಯಜಿ ಮಹಾರಾಜ್ ಹೇಳಿದರು. ಕುಂಭ ಕ್ಷೇತ್ರದಲ್ಲಿ ಸನಾತನ ಗ್ರಂಥ ಪ್ರದರ್ಶನಕ್ಕೆ ಭೇಟಿ ನೀಡಿದ ನಂತರ ಅವರು ಮಾತನಾಡುತ್ತಿದ್ದರು.
ಶ್ರೀ ಆನಂದ ಚೈತನ್ಯಜಿ ಮಹಾರಾಜ್ ಮಾತು ಮುಂದುವರೆಸಿ,
1. ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ ಮಾರ್ಗದರ್ಶನದಲ್ಲಿ ಸನಾತನ ಸಂಸ್ಥೆಯು ಮಾಡುತ್ತಿರುವ ಈ ಕಾರ್ಯವು ಅತ್ಯಂತ ಶ್ಲಾಘನೀಯವಾಗಿದೆ.
2. ಜನರು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಂಧಾನುಕರಣೆ ಮಾಡಿಕೊಳ್ಳುವ ಮೂಲಕ ಹಿಂದೂ ಧರ್ಮವನ್ನು ಮರೆಯುತ್ತಿದ್ದಾರೆ. ಆದ್ದರಿಂದ, ಯುವ ಪೀಳಿಗೆಯು ಸಂಸ್ಕೃತಿಹೀನವಾಗುತ್ತಿದೆ. ಸನಾತನ ಸಂಸ್ಥೆಯ ಸಾಧಕರು ಹಿಂದೂ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
3. ಗುರುಗಳ ಅನುಗ್ರಹವಿಲ್ಲದೆ ಈ ಕಾರ್ಯ ಮಾಡುವುದು ಅಸಾಧ್ಯವಾಗಿದೆ. ಸನಾತನ ಸಾಧಕರು ಗುರುಕೃಪೆಯಿಂದಲೇ ಕಾರ್ಯ ಮಾಡಲು ಸಾಧ್ಯ. ಸನಾತನ ಸಂಸ್ಥೆಯ ಕಾರ್ಯದ ಬೆಳವಣಿಗೆಗಾಗಿ ದೇವರಲ್ಲಿ ಪ್ರಾರ್ಥನೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!