
ನವದೆಹಲಿ – ಪ್ರಯಾಗರಾಜ್ ಮಹಾಕುಂಭದಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಮನಃಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ. ಈ ದುರಂತ ಘಟನೆಗೆ ದುರಾಡಳಿತ ಮತ್ತು ಆಡಳಿತವು ಸಾಮಾನ್ಯ ಭಕ್ತರಿಗಿಂತ ಗಣ್ಯರ (ವಿಐಪಿ) ಚಲನವಲನಗಳ ಮೇಲೆ ವಿಶೇಷ ಗಮನ ಹರಿಸಿದ್ದರಿಂದ ಉಂಟಾಗಿದೆ. ಮಹಾಕುಂಭವು ಇನ್ನೂ ಹಲವು ದಿನಗಳವರೆಗೆ ಮುಂದುವರಿಯುತ್ತದೆ ಮತ್ತು ಇನ್ನೂ ಅನೇಕ ಮಹಾ ಸ್ನಾನಗಳು ನಡೆಯುತ್ತವೆ. ಇಂದಿನಂತಹ ದುರದೃಷ್ಟಕರ ಘಟನೆ ಮತ್ತೆ ಸಂಭವಿಸಬಾರದು; ಆದ್ದರಿಂದ, ಸರಕಾರವು ವ್ಯವಸ್ಥೆಯನ್ನು ಸುಧಾರಿಸಬೇಕು. ‘ವಿಐಪಿ ಸಂಸ್ಕೃತಿ’ಯನ್ನು ತಡೆಯಲು ಮತ್ತು ಸರಕಾರ ಸಾಮಾನ್ಯ ಭಕ್ತರ ಅಗತ್ಯಗಳನ್ನು ಪೂರೈಸಲು ಉತ್ತಮ ವ್ಯವಸ್ಥೆಗಳನ್ನು ಮಾಡಬೇಕು ಎಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಪೋಸ್ಟ್ನಲ್ಲಿ ಆರೋಪಿಸಿದ್ದಾರೆ.
ಸಂಪಾದಕೀಯ ನಿಲುವುಅಮೃತಸ್ನಾನದ ಸಮಯದಲ್ಲಿ ಯಾವ ಗಣ್ಯರು ಬಂದರು ಮತ್ತು ಆಡಳಿತವು ಅವರಿಗೆ ಯಾವ ಸೌಲಭ್ಯಗಳನ್ನು ಒದಗಿಸಿತ್ತು ? ಅಮೃತಸ್ನಾನದ ಸಮಯದಲ್ಲಿ ಸಂಭವಿಸಿದ ಅಪಘಾತವು ದುರದೃಷ್ಟಕರವೇ ಆಗಿದೆ; ಆದರೆ, ಜನಪ್ರಿಯತೆ ಗಳಿಸುವ ಉದ್ದೇಶದಿಂದ ರಾಹುಲ ಗಾಂಧಿ ಇಂತಹ ಆಧಾರರಹಿತ ಆರೋಪಗಳನ್ನು ಮಾಡಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !