
ಪ್ರಯಾಗರಾಜ, ಜನವರಿ 30 (ಸುದ್ದಿ.) – ಸನಾತನ ಸಂಸ್ಥೆಯೊಂದಿಗೆ ನನಗೆ 14-15 ವರ್ಷಗಳಿಂದ ಪರಿಚಯವಿದೆ. ಯಾವಾಗ ದೇಶವಾಸಿಗಳ ಮನಸ್ಸಿನಲ್ಲಿಯೂ ಹಿಂದೂ ರಾಷ್ಟ್ರದ ಬಗ್ಗೆ ಯಾವುದೇ ವಿಚಾರವಿಲ್ಲದಿರುವಾಗ, ಭಾರತದಲ್ಲಿ ಹಿಂದೂ ರಾಷ್ಟ್ರಕ್ಕಾಗಿ ಬೇಡಿಕೆ ಮಂಡಿಸುತ್ತಿರುವವರಲ್ಲಿ ಸನಾತನ ಸಂಸ್ಥೆ ಅಗ್ರಸ್ಥಾನದಲ್ಲಿತ್ತು ಎಂದು ನಾನು ಹೇಳಲು ಬಯಸುತ್ತೇನೆ. ಇಂದು, ಅದೇ ಬೇಡಿಕೆ ಪ್ರತಿಯೊಬ್ಬ ಸನಾತನ ಹಿಂದೂವಿನ ಮುಖದಲ್ಲಿದೆ. ಪ್ರತಿಯೊಬ್ಬ ಜಾಗರೂಕ ಹಿಂದೂವಿಗೆ ‘ಹಿಂದೂ ರಾಷ್ಟ್ರ ಆಗಬೇಕು’ ಎಂದು ಅನಿಸುತ್ತಿದೆ.
ಸಂತರು-ಮಹಂತರು ಕೂಡ ಈಗ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಗೋ ರಕ್ಷಾ ದಳವು ಹಿಂದೂ ರಾಷ್ಟ್ರವಾದ ನಂತರ ದೇಶದಲ್ಲಿ ಗೋಹತ್ಯೆ ಖಂಡಿತವಾಗಿಯೂ ನಿಲ್ಲುತ್ತದೆ ಎಂದು ದೃಢವಾಗಿ ನಂಬುತ್ತದೆ. ಎಲ್ಲಾ ಹಿಂದೂ ಬಾಂಧವರಿಗೆ ನಾನು ಸೆಕ್ಟರ್ 9 ರಲ್ಲಿರುವ ಸನಾತನ ಸಂಸ್ಥೆಯ ಪ್ರದರ್ಶನ ಕಕ್ಷೆಗೆ ಖಂಡಿತವಾಗಿಯೂ ಭೇಟಿ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಈ ಪ್ರದರ್ಶನವನ್ನು ನೋಡಿದ ನಂತರ ಒಬ್ಬ ಸನಾತನಿ ಹಿಂದೂ ಹೇಗೆ ಜೀವಿಸಬೇಕು? ಎನ್ನುವ ಮಾಹಿತಿ ಎಲ್ಲರಿಗೂ ಸಿಗುತ್ತದೆ ಎಂದು ಗೋ ರಕ್ಷಾ ದಳದ ಶ್ರೀ. ಸತೀಶ ಕುಮಾರ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸನಾತನ ಸಂಸ್ಥೆಯ ಪ್ರದರ್ಶನ ಕಕ್ಷೆಗೆ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಭೇಟಿ ನೀಡಿದರು. ಆ ಸಮಯದಲ್ಲಿ ಅವರು ಸನಾತನ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. ಸನಾತನ ಸಂಸ್ಥೆಯ ವತಿಯಿಂದ ಶ್ರೀ. ಮಹೇಶ ಪಾಠಕ ಅವರು ಶ್ರೀ. ಸತೀಶ ಕುಮಾರ ಮತ್ತು ಅವರ ಸಹೋದ್ಯೋಗಿಗಳಿಗೆ ‘ಸನಾತನ ಪ್ರಭಾತ’ ದಿನಪತ್ರಿಕೆಯನ್ನು ಉಡುಗೊರೆಯಾಗಿ ನೀಡಿದರು.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram