|

ನವ ದೆಹಲಿ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಬೆಳಿಗ್ಗೆ 11 ಗಂಟೆಗೆ 2025-26ನೇ ಸಾಲಿನ ಮುಂಗಡಪತ್ರ ಮಂಡಿಸಿದರು. ಈ ಬಜೆಟ್ ಆದಾಯ ತೆರಿಗೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು, 12 ಲಕ್ಷ ರೂಪಾಯಿ ವರೆಗಿನ ಆದಾಯವನ್ನು ತೆರಿಗೆ ಮುಕ್ತಗೊಳಿಸಿದೆ. ಈ ನಿರ್ಣಯದಿಂದ ನೇರ ತೆರಿಗೆಯಿಂದ ಬರುವ ಆದಾಯದಲ್ಲಿ 1 ಲಕ್ಷ ಕೋಟಿ ರೂಪಾಯಿ ಮತ್ತು ಪರೋಕ್ಷ ತೆರಿಗೆ ಆದಾಯದಲ್ಲಿ 2 ಸಾವಿರದ 600 ಕೋಟಿ ರೂಪಾಯಿ ಹೊರೆ ಬೀಳಲಿದೆ. ಬಜೆಟ್ ಅಧಿವೇಶನದಲ್ಲಿ ಮುಂದಿನ ವಾರ ಹೊಸ ತೆರಿಗೆ ರಚನೆ ಮಸೂದೆಯನ್ನು ಮಂಡಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಕಸ್ಟಮ್ಸ್ ಸುಂಕದಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. ಇದರಿಂದ ಔಷಧಿಗಳಿಂದ ಹಿಡಿದು ಕೈಗಾರಿಕಾ ಸರಕುಗಳವರೆಗೆ ಹಲವು ವಲಯಗಳಿಗೆ ಲಾಭ ಆಗಲಿದೆ. ಈ ಬಜೆಟ್ 10 ಕ್ಷೇತ್ರಗಳಿಗೆ ವಿಶೇಷ ಒತ್ತು ನೀಡಿದೆ. ಇವುಗಳಲ್ಲಿ ಕೃಷಿ, ಉತ್ಪಾದನೆ, ಉದ್ಯೋಗ, ಸೂಕ್ಷ್ಮ, ಮಧ್ಯಮ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು, ಗ್ರಾಮೀಣಾಭಿವೃದ್ಧಿ ಮತ್ತು ಸಂಶೋಧನೆ ವಲಯಗಳು ಸೇರಿವೆ.
2025-26ನೇ ಸಾಲಿನ ಪರಿಷ್ಕೃತ ಬಜೆಟ್ ಅಂದಾಜುಗಳು
|
ಹೊಸ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಗಳು ಹೇಗಿರುತ್ತವೆ ?ಇದರ ಪ್ರಕಾರ, 12 ಲಕ್ಷ ರೂಪಾಯಿವರೆಗೆ ಆದಾಯ ಹೊಂದಿರುವ ವ್ಯಕ್ತಿ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ. ಶೇಕಡಾ 15 ರಷ್ಟು ಇಲ್ಲಿ ತೋರಿಸಿರುವ ತೆರಿಗೆಯನ್ನು ವಾಸ್ತವವಾಗಿ ವಿಧಿಸಲಾಗುವುದಿಲ್ಲ; ಆದರೆ 12 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಆದಾಯ ಹೊಂದಿರುವವರು ಎಲ್ಲಾ ತೆರಿಗೆಗಳನ್ನು ಪಾವತಿಸಬೇಕಾಗುತ್ತದೆ. ವೇತನವೆಂದು 12 ಲಕ್ಷ 75 ಸಾವಿರಗಳವರೆಗೆ ವೇತನ ಆದಾಯ ಹೊಂದಿರುವವರು ಸಹ ಈ ವಿನಾಯಿತಿಯನ್ನು ಪಡೆಯುತ್ತಾರೆ. |
ಬಜೆಟ್ನ ಮುಖ್ಯಾಂಶಗಳು
* ಹಿರಿಯ ನಾಗರಿಕರಿಗೆ ಟಿ.ಡಿ.ಎಸ್. ಮಿತಿ 50 ಸಾವಿರ ರೂಪಾಯಿಗಳಿಂದ 1 ಲಕ್ಷ ರೂಪಾಯಿಗೆ ಏರಿಕೆ
* ಎಲ್ಲಾ ಸರಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬ್ರಾಡ್ಬ್ಯಾಂಡ್ ಸೌಲಭ್ಯಗಳನ್ನು ಒದಗಿಸಲಾಗುವುದು.
* ಮುಂದಿನ ವರ್ಷದಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ 10 ಸಾವಿರ ಹೆಚ್ಚುವರಿ ಸ್ಥಾನಗಳು ಹೆಚ್ಚಿಸಿದರೇ ಮುಂದಿನ 5 ವರ್ಷಗಳಲ್ಲಿ 75 ಸಾವಿರ ಸ್ಥಾನಗಳನ್ನು ಹೆಚ್ಚಿಸಲಾಗುವುದು.
* ‘ಮೇಡ್ ಇನ್ ಇಂಡಿಯಾ’ ಹೆಸರಿನಲ್ಲಿ ವಿಶ್ವಾದ್ಯಂತ ಬಾಳಿಕೆ ಬರುವ ಆಟಿಕೆಗಳ ಉತ್ಪಾದನೆಯಲ್ಲಿ ಭಾರತಕ್ಕೆ ಹೆಸರು ತಂದು ಕೊಡಲು ಕ್ರಮ ಕೈಕೊಳ್ಳಲಾಗುವುದು.
* ದೇಶಾದ್ಯಂತ ಕೃತಕ ಬುದ್ಧಿಮತ್ತೆ(ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಕೇಂದ್ರಗಳನ್ನು ಸ್ಥಾಪಿಸಲು 500 ಕೋಟಿ ರೂಪಾಯಿ ಅನುದಾನ
* ಮುಂದಿನ 3 ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲೆಗಳಲ್ಲಿ ‘ಕ್ಯಾನ್ಸರ್ ಡೇ ಕೇರ್ ಸೆಂಟರ್’ಗಳನ್ನು ನಿರ್ಮಿಸಲಾಗುವುದು. ಮುಂದಿನ ಹಣಕಾಸು ವರ್ಷದಲ್ಲಿಯೇ 200 ಇಂತಹ ಕೇಂದ್ರಗಳನ್ನು ನಿರ್ಮಿಸಲಾಗುವುದು.
* ಬಿಹಾರಕ್ಕಾಗಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆಯ ಸ್ಥಾಪನೆಯನ್ನು ಘೋಷಿಸಲಾಯಿತು. ರಾಜ್ಯದಲ್ಲಿ ಐಐಟಿಗಳು ವಿಸ್ತಾರವಾಗಲಿದೆ. 3 ಹೊಸ ವಿಮಾನ ನಿಲ್ದಾಣಗಳನ್ನು ಸಹ ನಿರ್ಮಿಸಲಾಗುವುದು.
* ಮೊದಲ ಬಾರಿಗೆ ಉದ್ಯಮಿಗಳಾಗುತ್ತಿರುವ ಮಹಿಳೆಯರಿಗೆ 2 ಕೋಟಿ ರೂಪಾಯಿಗಳ ಅವಧಿ ಸಾಲ ಸಿಗಲಿದೆ.
* ರಾಜ್ಯಗಳ ಸಹಭಾಗಿತ್ವದಲ್ಲಿ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುವುದು.
ರೈತರಿಗೆ ಮಹತ್ವದ ಘೋಷಣೆಗಳು
* ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
* ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯಿಂದ ದೇಶದ 100 ಜಿಲ್ಲೆಗಳು ಪ್ರಯೋಜನ ಪಡೆಯಲಿವೆ.
* ಹೈನುಗಾರಿಕೆ ಮತ್ತು ಮೀನುಗಾರಿಕೆಗೆ 5 ಲಕ್ಷ ರೂಪಾಯಿಗಳವರೆಗೆ ಸಾಲ
ಯಾವುದು ಅಗ್ಗವಾಗಲಿದೆ?
* ವಿದ್ಯುತ್ ವಾಹನಗಳು ಮತ್ತು ಮೊಬೈಲ್ ಫೋನ್ಗಳಿಗೆ ಲಿಥಿಯಂ-ಅಯಾನ್ ಬ್ಯಾಟರಿಗಳು
* ಮೊಬೈಲ್ ಫೋನ್
* ಇ-ಕಾರ್
* ಎಲ್ಇಡಿ ಟಿವಿ
* ಬಟ್ಟೆ ವಸ್ತುಗಳು
* ದೇಶೀಯವಾಗಿ ತಯಾರಿಸಿದ ಟಿವಿಯ ಬಿಡಿಭಾಗಗಳು
* ಕ್ಯಾನ್ಸರ್ ಮತ್ತು ಇತರ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುವ ಒಟ್ಟು 36 ಅಗತ್ಯ ಔಷಧಿಗಳು
* 6 ಇತರ ಜೀವನಾವಶ್ಯಕ ಔಷಧಗಳು
* ಚರ್ಮದ ವಸ್ತುಗಳು
ಮಹಾಕುಂಭದಲ್ಲಿ ಕಾಲ್ತುಳಿತ; ವಿರೋಧಿ ಪಕ್ಷಗಳಿಂದ ಘೋಷಣೆ
ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾಗ, ವಿರೋಧ ಪಕ್ಷಗಳ ಸದಸ್ಯರು ಪ್ರಯಾಗರಾಜನಲ್ಲಿ ನಡೆದ ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಚರ್ಚೆಗೆ ಒತ್ತಾಯಿಸಿದರು. ಈ ಬೇಡಿಕೆಯನ್ನು ಸ್ವೀಕರಿಸದ ಕಾರಣ ಪ್ರತಿಪಕ್ಷಗಳು ಸಭೆಯಿಂದ ಹೊರನಡೆದವು. ಈ ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದರು ಮತ್ತು 60 ಜನರು ಗಾಯಗೊಂಡಿದ್ದಾರೆ.
140 ಕೋಟಿ ಭಾರತೀಯರ ಕನಸುಗಳನ್ನು ನನಸಾಗಿಸುವ ಬಜೆಟ್ ! – ಪ್ರಧಾನಿ ಮೋದಿ

ಇಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ 140 ಕೋಟಿ ಭಾರತೀಯರ ಕನಸುಗಳನ್ನು ನನಸಾಗಿಸುವ ಬಜೆಟ್ ಆಗಿದೆ. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಮಾನ್ಯ ನಾಗರಿಕರು ಮುಂದಕ್ಕೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತಾರೆ. ಈ ಬಜೆಟ್ ಖಂಡಿತವಾಗಿಯೂ ಸಾಮಾನ್ಯ ಜನರ ಉಳಿತಾಯವನ್ನು ಹೆಚ್ಚಿಸುತ್ತದೆ. ಈ ಬಜೆಟ್ ದೇಶದ ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಇದು ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ಅಧಿಕ ಚಾಲನೆ ಸಿಗಲಿದೆ. ಇದು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಖಂಡಿತವಾಗಿಯೂ ಲಾಭವಾಗುವುದು, ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ