
ನವದೆಹಲಿ – ‘ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ನ್ಯಾಸ’ದ ಟ್ರಸ್ಟಿ ಮತ್ತು ಮಾಜಿ ಶಾಸಕ ಕಾಮೇಶ್ವರ ಚೌಪಾಲ್ (ವಯಸ್ಸು ೬೮ ವರ್ಷ) ಇವರು ಫೆಬ್ರುವರಿ ೭ ರಂದು ಇಲ್ಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದಿಂದಾಗಿ ಅವರು ಕೆಲುವು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕಾಮೇಶ್ವರ ಚೌಪಾಲ್ ರಾಮ ಜನ್ಮಭೂಮಿ ಆಂದೋಲನದ ಮೊದಲ ಕಾರಸೇವಕ (ರಾಮ ಮಂದಿರಕ್ಕಾಗಿ ಆಂದೋಲನ ಮಾಡುವವರು)ರಾಗಿದ್ದರು. ಅವರೇ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಡದ ಮೊದಲ ಇಟ್ಟಿಗೆ ಇಟ್ಟಿದ್ದರು. ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ‘ಪ್ರಥಮ ಕಾರಸೇವಕ’ ಎಂಬ ಸ್ಥಾನ ನೀಡಿದ್ದರು. ಕಾಮೇಶ್ವರ ಚೌಪಾಲ ಇವರು ರಾಜಕೀಯಕ್ಕೆ ಬರುವ ಮೊದಲು ವಿಶ್ವ ಹಿಂದೂ ಪರಿಷತ್ತಿನ ಸಹ ಸಚಿವರಾಗಿದ್ದರು ಹಾಗೂ ಅವರು ಭಾಜಪದ ಬಿಹಾರ ಪ್ರದೇಶ ಕಾರ್ಯದರ್ಶಿ ಕೂಡ ಆಗಿದ್ದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!