
ಮಂಗಳೂರು – ವಾಯು ಸೇನೆಯ ತರಬೇತಿಯ ವೇಳೆ ಯೋಧ ಮಂಜುನಾಥ ಇವರು ವಿಮಾನದಿಂದ ಕೆಳಗೆ ಹಾರುವಾಗ ಪ್ಯಾರಾಚ್ಯೂಟ್ ತೆರೆಯದೇ ಇದ್ದರಿಂದ 1 ಸಾವಿರದ 500 ಅಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. 36 ವರ್ಷದ ಮಂಜುನಾಥ್ ಇವರು ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ನಲ್ಲಿ ವಾರೆಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನ್ಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದರು. ತರಬೇತಿಯ ಸಮಯದಲ್ಲಿ ಹಾರುವಾಗ ಜೊತೆಗಿದ್ದ 11 ಯೋಧರು ಸುರಕ್ಷಿತವಾಗಿ ಕೆಳಗೆ ಇಳಿದಿದ್ದಾರೆ, ಆದರೆ ಯೋಧ ಮಂಜುನಾಥ ಕಾಣದೇ ಇದ್ದಾಗ ಹುಡುಕಾಟ ಆರಂಭವಾಯಿತು, ಬಳಿಕ ಸುತೆಂಡಿ ಗ್ರಾಮದ ಬಳಿ ಇದ್ದ ಹೊಲದಲ್ಲಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾದರು. ತಕ್ಷಣ ಇತರ ಅಧಿಕಾರಿಗಳು ಮಂಜುನಾಥ ಅವರನ್ನು ಆಸ್ಪತ್ರೆಗೆ ದಾಖಲಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಮಂಜುನಾಥ ಇವರ ಪಾರ್ಥಿವ ಶರೀರ ನಾಳೆ ಸ್ವಗ್ರಾಮ ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರಿನಲ್ಲಿ ಬರಲಿದ್ದು ಸಕಲ ಸರಕಾರಿ ಗೌರವದಿಂದ ಅಂತ್ಯಕ್ರಿಯೆ ನೆರವೇರಲಿದೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram