ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ, ಫೆಬ್ರುವರಿ ೬ (ವಾರ್ತೆ) : ‘ಆರ್ಟ್ ಆಫ್ ಲಿವಿಂಗ್’ ಈ ಆಧ್ಯಾತ್ಮಿಕ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಇವರಿಗೆ ಮಹಾಕುಂಭ ಕ್ಷೇತ್ರದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಧರ್ಮ ಪ್ರಚಾರಕ ಸದ್ಗುರು ನಿಲೇಶ ಸಿಂಗಬಾಳ, ಮಹಾರಾಷ್ಟ್ರ ಮತ್ತು ಛತ್ತೀಸ್ಗಡ್ ಸಮನ್ವಯಕ ಶ್ರೀ. ಸುನೀಲ ಘನವಟ, ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯದ ಸಮನ್ವಯಕ ಶ್ರೀ. ವಿಶ್ವನಾಥ ಕುಲಕರ್ಣಿ ಇವರು ಭೇಟಿ ಮಾಡಿದರು. ಆ ಸಮಯದಲ್ಲಿ ಸಮಿತಿಯ ವತಿಯಿಂದ ಪುಷ್ಪಹಾರ ಹಾಕಿ ಶಾಲು ನೀಡಿ ಗುರುದೇವ ಶ್ರೀ ಶ್ರೀ ರವಿಶಂಕರ ಇವರನ್ನು ಗೌರವಿಸಿದರು.
ಸದ್ಗುರು ನಿಲೇಶ ಸಿಂಗಬಾಳ ಇವರು ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯದ ಬಗ್ಗೆ ಗುರುದೇವ ಶ್ರೀ ಶ್ರೀ ರವಿಶಂಕರ ಇವರಿಗೆ ಮಾಹಿತಿ ನೀಡಿದರು. ಗುರುದೇವ ಶ್ರೀ ಶ್ರೀ ರವೀಶಂಕರ ಇವರು ‘ಹಿಂದೂ ಜನ ಜಾಗೃತಿ ಸಮಿತಿಯ ಕಾರ್ಯ ಒಳ್ಳೆಯ ರೀತಿಯಲ್ಲಿ ನಡೆಯುತ್ತಿದೆ, ಸಮಿತಿಯ ಕಾರ್ಯದ ಬಗ್ಗೆ ನನಗೆ ತಿಳಿದಿದೆ, ಎಂದು ಹೇಳಿ ಕಾರ್ಯಕ್ಕೆ ಆಶೀರ್ವಾದ ನೀಡಿದರು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಚೇತನ ರಾಜಹಂಸ ಇವರು ಕೂಡ ಈ ಸಮಯದಲ್ಲಿ ಉಪಸ್ಥಿತರಿದ್ದರು. ಗುರುದೇವ ಶ್ರೀ ಶ್ರೀ ರವಿಶಂಕರ್ ಇವರು ಇವರೆಲ್ಲರಿಗೂ ಗೌರವ ವಸ್ತ್ರ ನೀಡಿ ಸತ್ಕರಿಸಿದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!