
ಬಿಜಾಪುರ (ಛತ್ತೀಸ್ಗಡ) – ಇಲ್ಲಿನ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು 31 ನಕ್ಸಲರನ್ನು ಹತ್ಯೆ ಮಾಡಿದರು. ಅದೇ ಸಮಯದಲ್ಲಿ, 2 ಸೈನಿಕರು ವೀರಮರಣ ಹೊಂದಿದರು, ಮತ್ತು 2 ಇತರ ಸೈನಿಕರು ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಈ ವರ್ಷ ಇದು ಎರಡನೇ ಚಕಮಕಿಯಾಗಿದೆ. ಇದಕ್ಕೂ ಮೊದಲು, ಜನವರಿ 12 ರಂದು ನಡೆದ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದರು.
ಈ ವರ್ಷದಲ್ಲಿ ಇಲ್ಲಿಯವರೆಗೆ 62 ನಕ್ಸಲರನ್ನು ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಹಾಗೂ ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ಹೋರಾಡುವಾಗ 11 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು. ಹಾಗೆಯೇ ಈ ವರ್ಷದಲ್ಲಿ ಬಿಜಾಪುರದ 5 ಜನರು ಸೇರಿದಂತೆ ಕನಿಷ್ಠ 9 ಜನ ನಕ್ಸಲರ ಹತ್ಯೆ ಮಾಡಲಾಗಿದೆ. ಛತ್ತೀಸ್ಗಢ ರಾಜ್ಯದ ‘ಅಬುಝಮಾಡ’ ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದ ಪಕ್ಕದಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನವು ನಕ್ಸಲರ ಒಂದು ಸುರಕ್ಷಿತ ಆಶ್ರಯತಾಣವಾಗಿದೆ ಎಂದು ನಂಬಲಾಗಿದೆ. 2 ಸಾವಿರದ 799 ಚದರ ಕಿಲೋಮೀಟರ್ಗಳಷ್ಟು ವಿಸ್ತೀರ್ಣದಲ್ಲಿರುವ ಈ ಉದ್ಯಾನವನವು ಮಹಾರಾಷ್ಟ್ರದ ಗಡಿಯಲ್ಲಿದೆ. ಇದನ್ನು 1983 ರಲ್ಲಿ ಹುಲಿ ಮೀಸಲು ಪ್ರದೇಶವೆಂದು ಘೋಷಿಸಲಾಗಿದೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!