
ಬಿಜಾಪುರ (ಛತ್ತೀಸ್ಗಡ) – ಇಲ್ಲಿನ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು 31 ನಕ್ಸಲರನ್ನು ಹತ್ಯೆ ಮಾಡಿದರು. ಅದೇ ಸಮಯದಲ್ಲಿ, 2 ಸೈನಿಕರು ವೀರಮರಣ ಹೊಂದಿದರು, ಮತ್ತು 2 ಇತರ ಸೈನಿಕರು ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಈ ವರ್ಷ ಇದು ಎರಡನೇ ಚಕಮಕಿಯಾಗಿದೆ. ಇದಕ್ಕೂ ಮೊದಲು, ಜನವರಿ 12 ರಂದು ನಡೆದ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದರು.
🚨 Bijapur Encounter 🚨
🔸 31 Naxalites eliminated in a fierce clash with security forces.
🔸 2 brave jawans attained Veergati, 2 injured.
🔸 HM Amit Shah calls it a big step towards a Naxal-free India.pic.twitter.com/OMPFFMcw3q
— Sanatan Prabhat (@SanatanPrabhat) February 9, 2025
ಈ ವರ್ಷದಲ್ಲಿ ಇಲ್ಲಿಯವರೆಗೆ 62 ನಕ್ಸಲರನ್ನು ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಹಾಗೂ ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ಹೋರಾಡುವಾಗ 11 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು. ಹಾಗೆಯೇ ಈ ವರ್ಷದಲ್ಲಿ ಬಿಜಾಪುರದ 5 ಜನರು ಸೇರಿದಂತೆ ಕನಿಷ್ಠ 9 ಜನ ನಕ್ಸಲರ ಹತ್ಯೆ ಮಾಡಲಾಗಿದೆ. ಛತ್ತೀಸ್ಗಢ ರಾಜ್ಯದ ‘ಅಬುಝಮಾಡ’ ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದ ಪಕ್ಕದಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನವು ನಕ್ಸಲರ ಒಂದು ಸುರಕ್ಷಿತ ಆಶ್ರಯತಾಣವಾಗಿದೆ ಎಂದು ನಂಬಲಾಗಿದೆ. 2 ಸಾವಿರದ 799 ಚದರ ಕಿಲೋಮೀಟರ್ಗಳಷ್ಟು ವಿಸ್ತೀರ್ಣದಲ್ಲಿರುವ ಈ ಉದ್ಯಾನವನವು ಮಹಾರಾಷ್ಟ್ರದ ಗಡಿಯಲ್ಲಿದೆ. ಇದನ್ನು 1983 ರಲ್ಲಿ ಹುಲಿ ಮೀಸಲು ಪ್ರದೇಶವೆಂದು ಘೋಷಿಸಲಾಗಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ