
ಬಿಜಾಪುರ (ಛತ್ತೀಸ್ಗಡ) – ಇಲ್ಲಿನ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು 31 ನಕ್ಸಲರನ್ನು ಹತ್ಯೆ ಮಾಡಿದರು. ಅದೇ ಸಮಯದಲ್ಲಿ, 2 ಸೈನಿಕರು ವೀರಮರಣ ಹೊಂದಿದರು, ಮತ್ತು 2 ಇತರ ಸೈನಿಕರು ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಈ ವರ್ಷ ಇದು ಎರಡನೇ ಚಕಮಕಿಯಾಗಿದೆ. ಇದಕ್ಕೂ ಮೊದಲು, ಜನವರಿ 12 ರಂದು ನಡೆದ ಚಕಮಕಿಯಲ್ಲಿ 3 ನಕ್ಸಲರು ಸಾವನ್ನಪ್ಪಿದ್ದರು.
🚨 Bijapur Encounter 🚨
🔸 31 Naxalites eliminated in a fierce clash with security forces.
🔸 2 brave jawans attained Veergati, 2 injured.
🔸 HM Amit Shah calls it a big step towards a Naxal-free India.pic.twitter.com/OMPFFMcw3q
— Sanatan Prabhat (@SanatanPrabhat) February 9, 2025
ಈ ವರ್ಷದಲ್ಲಿ ಇಲ್ಲಿಯವರೆಗೆ 62 ನಕ್ಸಲರನ್ನು ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಹಾಗೂ ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ಹೋರಾಡುವಾಗ 11 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು. ಹಾಗೆಯೇ ಈ ವರ್ಷದಲ್ಲಿ ಬಿಜಾಪುರದ 5 ಜನರು ಸೇರಿದಂತೆ ಕನಿಷ್ಠ 9 ಜನ ನಕ್ಸಲರ ಹತ್ಯೆ ಮಾಡಲಾಗಿದೆ. ಛತ್ತೀಸ್ಗಢ ರಾಜ್ಯದ ‘ಅಬುಝಮಾಡ’ ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದ ಪಕ್ಕದಲ್ಲಿರುವ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನವು ನಕ್ಸಲರ ಒಂದು ಸುರಕ್ಷಿತ ಆಶ್ರಯತಾಣವಾಗಿದೆ ಎಂದು ನಂಬಲಾಗಿದೆ. 2 ಸಾವಿರದ 799 ಚದರ ಕಿಲೋಮೀಟರ್ಗಳಷ್ಟು ವಿಸ್ತೀರ್ಣದಲ್ಲಿರುವ ಈ ಉದ್ಯಾನವನವು ಮಹಾರಾಷ್ಟ್ರದ ಗಡಿಯಲ್ಲಿದೆ. ಇದನ್ನು 1983 ರಲ್ಲಿ ಹುಲಿ ಮೀಸಲು ಪ್ರದೇಶವೆಂದು ಘೋಷಿಸಲಾಗಿದೆ.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ