ತುಪ್ಪ ಪೂರೈಕೆ ಟೆಂಡರ್ಗಾಗಿ ಡೈರಿ ಮಾಲೀಕರು ನಕಲಿ ದಾಖಲೆಗಳನ್ನು ಸಿದ್ಧಪಡಿಸಿರುವುದು ಬಹಿರಂಗ

ನವ ದೆಹಲಿ – ತಿರುಪತಿಯ ಲಡ್ಡು ಪ್ರಸಾದದ ಪ್ರಕರಣದಲ್ಲಿ ತುಪ್ಪ ಪೂರೈಕೆ ಟೆಂಡರ್ಗಾಗಿ ಡೈರಿ ಮಾಲೀಕರು ನಕಲಿ ದಾಖಲೆಗಳನ್ನು ಸಿದ್ಧಪಡಿಸಿರುವುದು ಬಹಿರಂಗವಾಗಿದೆ. ಇವರ ಹೆಸರುಗಳು ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ ಜೈನ್ ಮತ್ತು ಪೋಮಿಲ್ ಜೈನ್, ವೈಷ್ಣವಿ ಡೈರಿಯ ಅಪೂರ್ವ ಚಾವಡಾ ಮತ್ತು ಎಆರ್ ಡೈರಿಯ ರಾಜು ರಾಜಶೇಖರನ್ ಎಂದು ತಿಳಿದುಬಂದಿದೆ. ತಿರುಪತಿ ಪ್ರಸಾದದ ಲಡ್ಡು ತಯಾರಿಸಲು ತುಪ್ಪ ಪೂರೈಕೆಯಲ್ಲಿ ಅಕ್ರಮಗಳು ಕಂಡುಬಂದ ನಂತರ ನಾಲ್ವರನ್ನು ಬಂಧಿಸಲಾಗಿದೆ. ಸಿಬಿಐಯ ತನಿಖೆಯಲ್ಲಿ, ವೈಷ್ಣವಿ ಡೈರಿಯ ಪ್ರತಿನಿಧಿಗಳು ಎಆರ್ ಡೈರಿಯ ಹೆಸರಿನಲ್ಲಿ ಟೆಂಡರ್ಗಳನ್ನು ಪಡೆದಿದ್ದರು. ವೈಷ್ಣವಿ ಡೈರಿಯು ಟೆಂಡರ್ ಪ್ರಕ್ರಿಯೆಯಲ್ಲಿ ತಿರುಚುವ ಸಲುವಾಗಿ ಎಆರ್ ಡೈರಿಯ ಹೆಸರನ್ನು ಬಳಸಿಕೊಂಡು ನಕಲಿ ದಾಖಲೆಗಳನ್ನು ಸಿದ್ಧಪಡಿಸಿತ್ತು. ವೈಷ್ಣವಿ ಡೈರಿ ನಿರ್ಮಿಸಿದ್ದ ನಕಲಿ ದಾಖಲೆಗಳಲ್ಲಿ ಅವರು ರೂರ್ಕಿಯ ಭೋಲೆ ಬಾಬಾ ಡೈರಿಯಿಂದ ತುಪ್ಪ ಖರೀದಿಸಿರುವುದಾಗಿ ಹೇಳಿಕೊಂಡಿದೆ; ಆದರೆ ಅವರಿಗೆ ಅಗತ್ಯ ಪ್ರಮಾಣದಲ್ಲಿ ಸರಬರಾಜು ಮಾಡುವ ಸಾಮರ್ಥ್ಯವಿರಲಿಲ್ಲ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !