ಉತ್ತರಾಖಂಡದ ಮುಖ್ಯಮಂತ್ರಿಗಳಿಂದ ಕೂಡ ಸ್ನಾನ

ಪ್ರಯಾಗರಾಜ – ರಾಷ್ಟ್ರಪತಿ ದ್ರೌಪದಿ ಮುರ್ಮೂ ಇವರು ಮಹಾಕುಂಭದಲ್ಲಿನ ತ್ರಿವೇಣಿ ಸಂಗಮದಲ್ಲಿ ೩ ಸಲ ಮುಳುಗಿ ಸೂರ್ಯನಿಗೆ ಅರ್ಘ್ಯ ನೀಡಿದರು ಮತ್ತು ಸ್ನಾನದ ಮೊದಲು ಗಂಗಾ ಮಾತೆಗೆ ಹೂವು ಅರ್ಪಿಸಿದರು.

ಈ ಸಮಯದಲ್ಲಿ ಮಂತ್ರೋಚ್ಚಾರದ ವಾತಾವರಣದಲ್ಲಿ ಗಂಗಾ ಪೂಜೆ ಮತ್ತು ಆರತಿ ನಡೆಯಿತು. ಇದರ ನಂತರ ರಾಷ್ಟ್ರಪತಿ ಮುರ್ಮೂ ಲೇಟೆ ಹನುಮಾನ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ಆರತಿ ಮಾಡಿದರು.

ಅದರ ನಂತರ ಅಕ್ಷಯವಟ ಧಾಮ್ಗೆ ಹೋಗಿ ಪೂಜೆ ಮಾಡಿದರು. ಅವರೊಂದಿಗೆ ಉತ್ತರಪ್ರದೇಶದ ರಾಜ್ಯಪಾಲ ಆನಂದಿ ಬೇನ ಪಟೇಲ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉಪಸ್ಥಿತರಿದ್ದರು.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ಸಕುಟುಂಬ ಸಂಗಮದಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ಅರ್ಪಿಸಿದರು. ಮಹಾಕುಂಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತರ ಗದ್ದಲ ಆಗುತ್ತಿರುವುದರಿಂದ ಅರೈಲ ಘಟದಿಂದ ಸಂಗಮದ ವರೆಗಿನ ಬೋಟ್ ಸೇವೆಗಳು ನಿಲ್ಲಿಸಲಾಗಿದೆ.
೧೯೫೪ ನಂತರ ಕುಂಭ ಕ್ಷೇತ್ರದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ !
ರಾಷ್ಟ್ರಪತಿ ದ್ರೌಪದಿ ಮುರ್ಮೂ ಇವರು ಮಹಾಕುಂಭದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ ಆಗಿದ್ದಾರೆ. ಈ ಹಿಂದೆ ೧೯೫೪ ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ ಇವರು ಮಹಾಕುಂಭದಲ್ಲಿ ಸ್ನಾನ ಮಾಡಿದ್ದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !