ಉತ್ತರಾಖಂಡದ ಮುಖ್ಯಮಂತ್ರಿಗಳಿಂದ ಕೂಡ ಸ್ನಾನ

ಪ್ರಯಾಗರಾಜ – ರಾಷ್ಟ್ರಪತಿ ದ್ರೌಪದಿ ಮುರ್ಮೂ ಇವರು ಮಹಾಕುಂಭದಲ್ಲಿನ ತ್ರಿವೇಣಿ ಸಂಗಮದಲ್ಲಿ ೩ ಸಲ ಮುಳುಗಿ ಸೂರ್ಯನಿಗೆ ಅರ್ಘ್ಯ ನೀಡಿದರು ಮತ್ತು ಸ್ನಾನದ ಮೊದಲು ಗಂಗಾ ಮಾತೆಗೆ ಹೂವು ಅರ್ಪಿಸಿದರು.

ಈ ಸಮಯದಲ್ಲಿ ಮಂತ್ರೋಚ್ಚಾರದ ವಾತಾವರಣದಲ್ಲಿ ಗಂಗಾ ಪೂಜೆ ಮತ್ತು ಆರತಿ ನಡೆಯಿತು. ಇದರ ನಂತರ ರಾಷ್ಟ್ರಪತಿ ಮುರ್ಮೂ ಲೇಟೆ ಹನುಮಾನ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ಆರತಿ ಮಾಡಿದರು.

ಅದರ ನಂತರ ಅಕ್ಷಯವಟ ಧಾಮ್ಗೆ ಹೋಗಿ ಪೂಜೆ ಮಾಡಿದರು. ಅವರೊಂದಿಗೆ ಉತ್ತರಪ್ರದೇಶದ ರಾಜ್ಯಪಾಲ ಆನಂದಿ ಬೇನ ಪಟೇಲ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉಪಸ್ಥಿತರಿದ್ದರು.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ಸಕುಟುಂಬ ಸಂಗಮದಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ಅರ್ಪಿಸಿದರು. ಮಹಾಕುಂಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತರ ಗದ್ದಲ ಆಗುತ್ತಿರುವುದರಿಂದ ಅರೈಲ ಘಟದಿಂದ ಸಂಗಮದ ವರೆಗಿನ ಬೋಟ್ ಸೇವೆಗಳು ನಿಲ್ಲಿಸಲಾಗಿದೆ.
೧೯೫೪ ನಂತರ ಕುಂಭ ಕ್ಷೇತ್ರದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ !
ರಾಷ್ಟ್ರಪತಿ ದ್ರೌಪದಿ ಮುರ್ಮೂ ಇವರು ಮಹಾಕುಂಭದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ ಆಗಿದ್ದಾರೆ. ಈ ಹಿಂದೆ ೧೯೫೪ ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ ಇವರು ಮಹಾಕುಂಭದಲ್ಲಿ ಸ್ನಾನ ಮಾಡಿದ್ದರು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation