ಉತ್ತರಾಖಂಡದ ಮುಖ್ಯಮಂತ್ರಿಗಳಿಂದ ಕೂಡ ಸ್ನಾನ

ಪ್ರಯಾಗರಾಜ – ರಾಷ್ಟ್ರಪತಿ ದ್ರೌಪದಿ ಮುರ್ಮೂ ಇವರು ಮಹಾಕುಂಭದಲ್ಲಿನ ತ್ರಿವೇಣಿ ಸಂಗಮದಲ್ಲಿ ೩ ಸಲ ಮುಳುಗಿ ಸೂರ್ಯನಿಗೆ ಅರ್ಘ್ಯ ನೀಡಿದರು ಮತ್ತು ಸ್ನಾನದ ಮೊದಲು ಗಂಗಾ ಮಾತೆಗೆ ಹೂವು ಅರ್ಪಿಸಿದರು.

ಈ ಸಮಯದಲ್ಲಿ ಮಂತ್ರೋಚ್ಚಾರದ ವಾತಾವರಣದಲ್ಲಿ ಗಂಗಾ ಪೂಜೆ ಮತ್ತು ಆರತಿ ನಡೆಯಿತು. ಇದರ ನಂತರ ರಾಷ್ಟ್ರಪತಿ ಮುರ್ಮೂ ಲೇಟೆ ಹನುಮಾನ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ಆರತಿ ಮಾಡಿದರು.

ಅದರ ನಂತರ ಅಕ್ಷಯವಟ ಧಾಮ್ಗೆ ಹೋಗಿ ಪೂಜೆ ಮಾಡಿದರು. ಅವರೊಂದಿಗೆ ಉತ್ತರಪ್ರದೇಶದ ರಾಜ್ಯಪಾಲ ಆನಂದಿ ಬೇನ ಪಟೇಲ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉಪಸ್ಥಿತರಿದ್ದರು.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ಸಕುಟುಂಬ ಸಂಗಮದಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ಅರ್ಪಿಸಿದರು. ಮಹಾಕುಂಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತರ ಗದ್ದಲ ಆಗುತ್ತಿರುವುದರಿಂದ ಅರೈಲ ಘಟದಿಂದ ಸಂಗಮದ ವರೆಗಿನ ಬೋಟ್ ಸೇವೆಗಳು ನಿಲ್ಲಿಸಲಾಗಿದೆ.
೧೯೫೪ ನಂತರ ಕುಂಭ ಕ್ಷೇತ್ರದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ !
ರಾಷ್ಟ್ರಪತಿ ದ್ರೌಪದಿ ಮುರ್ಮೂ ಇವರು ಮಹಾಕುಂಭದಲ್ಲಿ ಸ್ನಾನ ಮಾಡುವ ದೇಶದ ಎರಡನೆಯ ರಾಷ್ಟ್ರಪತಿ ಆಗಿದ್ದಾರೆ. ಈ ಹಿಂದೆ ೧೯೫೪ ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ ಇವರು ಮಹಾಕುಂಭದಲ್ಲಿ ಸ್ನಾನ ಮಾಡಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ