
ಪ್ರಯಾಗರಾಜ (ಉತ್ತರ ಪ್ರದೇಶ) – ಸಾಮಾಜಿಕ ಮಾಧ್ಯಮಗಳಿಂದ ಮಹಾಕುಂಭದ ಬಗ್ಗೆ ಸುಳ್ಳು ಪೋಸ್ಟ್ ಮಾಡಿದವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳ 7 ಖಾತೆಗಳ ವಿರುದ್ಧ ಅಪರಾಧಗಳನ್ನು ದಾಖಲಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಆದೇಶದ ಮೇರೆಗೆ, ಪೊಲೀಸ ಮಹಾನಿರ್ದೇಶಕ ಪ್ರಶಾಂತ ಕುಮಾರ ಅವರು ಸಾಮಾಜಿಕ ಮಾಧ್ಯಮದಲ್ಲಿ ಅಂತಹ ಖಾತೆಗಳನ್ನು ಗುರುತಿಸಿ ಅವುಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಈ ಖಾತೆಗಳು 2021 ರಲ್ಲಿ ಗಾಝಿಪುರದ ನದಿಯ ದಡದಲ್ಲಿ ಪತ್ತೆಯಾದ ಶವಗಳ ಹಳೆಯ ವೀಡಿಯೊವನ್ನು ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದ ಶವಗಳು ಎಂದು ಹೇಳಿ ತಪ್ಪಾಗಿ ಪ್ರಚಾರ ಮಾಡಿವೆ. ಈ ಖಾತೆಗಳ ಮೇಲೆ ರಾಜ್ಯ ಸರಕಾರ ಮತ್ತು ಪೊಲೀಸರ ವರ್ಚಸ್ಸಿಗೆ ಕಳಂಕ ತರುವ ಮತ್ತು ಸಮಾಜದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುತ್ತವೆ’, ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಯಾಗರಾಜ ಕುಂಭಮೇಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಕುಂಭಮೇಳ ಪೊಲೀಸರು ತಮ್ಮ ಅಧಿಕೃತ ಖಾತೆಗಳಲ್ಲಿ ಈ ವೀಡಿಯೊವನ್ನು ಖಂಡಿಸುವ ಪೋಸ್ಟ್ ಅನ್ನು ಮಾಡಿದ್ದಾರೆ. ಪೊಲೀಸರು ನಾಗರಿಕರಲ್ಲಿ ಯಾವುದೇ ಭ್ರಮೆಗೊಳಿಸುವ ಮಾಹಿತಿಗೆ ಗಮನ ಕೊಡಬೇಡಿ ಮತ್ತು ಅನುಮಾನಾಸ್ಪದ ಪೋಸ್ಟ್ಗಳನ್ನು ತಕ್ಷಣವೇ ಪೊಲೀಸರಿಗೆ ವರದಿ ಮಾಡುವಂತೆ ಮನವಿ ಮಾಡಿದ್ದಾರೆ.
ಅಪರಾಧ ದಾಖಲಾಗಿರುವ 7 ಖಾತೆಗಳು ಕೆಳಗಿನಂತಿದೆ :
1. Yadavking००००११ (@Yadavking००००११) – ಇನ್ಸ್ಟಾಗ್ರಾಮ್
2. Komal Yadav (@komalyadav_lalubadi९४) – ಇನ್ಸ್ಟಾಗ್ರಾಮ್
3. Amar Nath Yadav (amar_ydvkvp_५३५४_) – ಮೆಟಾ ಥ್ರೆಡ್
4. Banwari Lal – Bairwa (@B_L__VERMA) – ಎಕ್ಸ್
5. Kavita Kumari (@KavitaK२२६२८) – ಎಕ್ಸ್
6. Sonu Chaudhary (SonyChaudhary७०) – ಎಕ್ಸ್
7. Putul Kumar Kumar (@Puatulkumar९७९५)) – ಯುಟ್ಯೂಬ
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ