ನವದೆಹಲಿ – ಇಲ್ಲಿ ಫೆಬ್ರವರಿ 17 ರಂದು ಮುಂಜಾನೆ 5.36 ಕ್ಕೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 4 ತೀವ್ರತೆಯ ಭೂಕಂಪ ದಾಖಲಾಗಿದೆ. ಭೂಕಂಪದ ಕೇಂದ್ರಬಿಂದುವು ದೆಹಲಿಯ ಮೇಲ್ಮೈಯಿಂದ ಕೇವಲ 5 ಕಿಮೀ ಕೆಳಗೆ ಇತ್ತು. ಭೂಕಂಪದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಶಾಂತವಾಗಿರಲು, ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಮತ್ತು ಸಂಭವನೀಯ ನಂತರದ ಕಂಪನಗಳ ಬಗ್ಗೆ ಎಚ್ಚರದಿಂದ ಇರುವಂತೆ ಮನವಿ ಮಾಡಿದರು. ಹಾಗೆಯೇ ಅಧಿಕಾರಿಗಳು ಪರಿಸ್ಥಿತಿಯನ್ನು ಅತಿ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’, ಎಂದು ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.