ಕಾಲ್ತುಳಿತದ ಬಗ್ಗೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರಕಾರಗಳನ್ನು ಟೀಕಿಸಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಾನಸಭೆಯಲ್ಲಿ ನೀಡಿದ ಹೇಳಿಕೆ!

ಕೋಲಕಾತಾ (ಬಂಗಾಳ) – ಮಹಾಕುಂಭವು ‘ಮೃತ್ಯುಕುಂಭ’ವಾಗಿದೆ. ನಾನು ಮಹಾಕುಂಭ ಮತ್ತು ಗಂಗಾ ಮಾತೆಯನ್ನು ಗೌರವಿಸುತ್ತೇನೆ; ಆದರೆ ಸಾಮಾನ್ಯ ಜನರಿಗೆ ಯಾವುದೇ ಯೋಜನೆ ಇಲ್ಲ. ಶ್ರೀಮಂತರು ಮತ್ತು ಗಣ್ಯ ವ್ಯಕ್ತಿಗಳಿಗೆ 1 ಲಕ್ಷ ರೂಪಾಯಿವರೆಗಿನ ಡೇರೆಗಳು ಲಭ್ಯವಿದೆ; ಆದರೆ ಬಡವರಿಗೆ ಯಾವುದೇ ಸೌಲಭ್ಯವಿಲ್ಲ. ಜಾತ್ರೆಗಳಲ್ಲಿ ಕಾಲ್ತುಳಿತದ ಸಂದರ್ಭಗಳು ಸಾಮಾನ್ಯವಾಗಿದೆ; ಆದರೆ ಸರಿಯಾದ ನಿರ್ವಹಣೆ ಅಗತ್ಯ’, ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ ಕೇಂದ್ರ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರವನ್ನು ಟೀಕಿಸಿದರು.
1. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಜಪ ವಿರುದ್ಧ ಆರೋಪ ಮಾಡುತ್ತಾ, ಈ ಪಕ್ಷವು ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸುತ್ತಿದೆ. ಭಾಜಪ ಶಾಸಕರು ದ್ವೇಷವನ್ನು ಹರಡುತ್ತಾರೆ ಮತ್ತು ಸಮಾಜದಲ್ಲಿ ಬಿರುಕು ಮೂಡಿಸುತ್ತದೆ, ಎಂದು ಹೇಳಿದರು.
2. ಬಾಂಗ್ಲಾದೇಶದ ಕಟ್ಟರವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಭಾಜಪ ಆರೋಪಕ್ಕೆ ಮುಖ್ಯಮಂತ್ರಿ ಬ್ಯಾನರ್ಜಿ ಪ್ರತ್ಯುತ್ತರ ನೀಡುತ್ತಾ, ನನಗೆ ಬಾಂಗ್ಲಾದೇಶದ ಕಟ್ಟರವಾದಿಗಳೊಂದಿಗೆ ಯಾವುದೇ ಸಂಪರ್ಕವಿದೆ ಎಂದು ಭಾಜಪ ಸಾಬೀತುಪಡಿಸಿದರೆ, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಹೇಳಿದರು. ಸುಳ್ಳು ಆರೋಪ ಮಾಡುತ್ತಿರುವ ಭಾಜಪ ಶಾಸಕರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಲಿದ್ದೇನೆ’, ಎಂದು ಹೇಳಿದರು.
ಸಂಪಾದಕೀಯ ನಿಲುವು
|
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!