|
ಮುಂಬಯಿ – ಕಾಂಗ್ರೆಸ್ ನಾಯಕ ವಿಜಯ ವಡೇಟ್ಟಿವಾರ ಅವರು ಜಗದ್ಗುರು ನರೇಂದ್ರಾಚಾರ್ಯಜಿ ಮಹಾರಾಜರ ಬಗ್ಗೆ ನೀಡಿದ ಹೇಳಿಕೆಯಿಂದಾಗಿ ಎಲ್ಲೆಡೆಯಿಂದ ಟೀಕೆಗಳು ವ್ಯಕ್ತವಾಗುತ್ತಿವೆ. ರಾಜ್ಯದ ನಾನಾ ಕಡೆಗಳಲ್ಲಿ ಮಹಾರಾಜರ ಶಿಷ್ಯರು ಮತ್ತು ಅನುಯಾಯಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. “ವಡೇಟ್ಟಿವಾರ ಕ್ಷಮೆ ಕೇಳಬೇಕು” ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಗುತ್ತಿದೆ. ನರೇಂದ್ರಾಚಾರ್ಯಜಿ ಮಹಾರಾಜರು ಸ್ವತಃ ಮುಂಬಯಿ ಉಪನಗರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ವಿಜಯ ವಡೇಟ್ಟಿವಾರ ವಿರುದ್ಧ ದೂರು ದಾಖಲಿಸಿದ್ದಾರೆ. “ಮತಗಳ ಧಾರ್ಮಿಕ ಧ್ರುವೀಕರಣ ಮಾಡುವವರು ಮಹಾರಾಜರಾಗಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ವಿಜಯ ವಡೇಟ್ಟಿವಾರ ಅವರು ಜಗದ್ಗುರು ನರೇಂದ್ರಾಚಾರ್ಯ ಮಹಾರಾಜರ ಬಗ್ಗೆ ಹೇಳಿಕೆ ನೀಡಿದ್ದಾರೆ. ವಿಜಯ ವಡೇಟ್ಟಿವಾರ ಅವರು ಈ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ನೀಡಿಲ್ಲ.
ಸಂಪಾದಕೀಯ ನಿಲುವುಮುಸ್ಲಿಂ ಧರ್ಮಗುರುಗಳ ಬಗ್ಗೆ ಕಾಂಗ್ರೆಸ್ ಅಥವಾ ಇನ್ನಾವುದೇ ನಾಯಕರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೆ, ಈಗಾಗಲೇ ‘ಸರ್ ತನ್ ಸೆ ಜುದಾ’ (ಶಿರಚ್ಛೇದ) ಫತ್ವಾ ಹೊರಡಿಸುತ್ತಿದ್ದರು! |

ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.