
ಮಹಾಕುಂಭ ಮೇಳದ ಸಮಾರೋಪದ ಸಂದರ್ಭದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಪ್ರಯಾಗರಾಜ್ನಲ್ಲಿ ಇನ್ನೂ ಅಪಾರ ಜನಸಂದಣಿ ಇದೆ. ಜನವರಿ 13 ರಿಂದ ಮಹಾಶಿವರಾತ್ರಿಯ ದಿನ ಮಹಾಕುಂಭ ಮೇಳ ಮುಗಿಯುವವರೆಗೆ 66 ಕೋಟಿ ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ತ್ರಿವೇಣಿಯಲ್ಲಿ ಸ್ನಾನ ಮಾಡಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಭಕ್ತರು ಪ್ರಯಾಗರಾಜ್ನಲ್ಲಿ ಸ್ನಾನ ಮಾಡುವ ಮೂಲಕ ರಾಷ್ಟ್ರೀಯ ಏಕತೆಯ ಸಂದೇಶ ನೀಡಿದ್ದಾರೆ. ಪ್ರಯಾಗರಾಜ್ಗೆ ಬಂದ ಪ್ರತಿಯೊಬ್ಬ ಭಕ್ತನಿಗೂ ‘ವಸುದೈವ ಕುಟುಂಬಕಂ’ ಭಾವನೆ ಇತ್ತು. ಈ ಎಲ್ಲಾ ಭಕ್ತರನ್ನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ. ಮಹಾದೇವನು ಕಲ್ಯಾಣದ ದೇವರು. ಅವರ ಕೃಪಾಕಟಾಕ್ಷದಿಂದ ಎಲ್ಲಾ ವ್ಯವಸ್ಥೆಗಳು ನಡೆಯುತ್ತವೆ. ಮಹಾಶಿವರಾತ್ರಿಯ ಸಂದರ್ಭದಲ್ಲಿ ಉತ್ತರಪ್ರದೇಶದ ಎಲ್ಲಾ ಶಿವಾಲಯಗಳಲ್ಲಿ ಭಕ್ತರ ದೊಡ್ಡ ಜನಸಂದಣಿ ಇದೆ. ಕಾಶಿಯಲ್ಲಿ ನಿತ್ಯ 8-10 ಲಕ್ಷ ಭಕ್ತರು ಬಾಬಾ ವಿಶ್ವನಾಥನ ದರ್ಶನಕ್ಕೆ ಬರುತ್ತಿದ್ದಾರೆ. ಅಯೋಧ್ಯೆಯಲ್ಲಿಯೂ ಪ್ರಭು ರಾಮಲಲ್ಲಾನ ದರ್ಶನಕ್ಕೆ ನಿತ್ಯ 8-10 ಲಕ್ಷ ಭಕ್ತರು ಬರುತ್ತಿದ್ದಾರೆ. ಈ ಎಲ್ಲಾ ಭಕ್ತರ ಶ್ರದ್ಧೆಗೆ ನಾನು ನಮಿಸುತ್ತೇನೆ’, ಎಂದು ಹೇಳಿದರು.
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ