|

ಸಿಪಹಿಜಾಲಾ (ತ್ರಿಪುರ) – ಸಿಪಹಿಜಾಲಾ ಜಿಲ್ಲೆಯಲ್ಲಿ ಅಂದಾಜು 20 ರಿಂದ 25 ಬಾಂಗ್ಲಾದೇಶಿ ಕಳ್ಳ ಸಾಗಾಣೆದಾರರು ಭಾರತದ ಗಡಿಯೊಳಗೆ ನುಸುಳುತ್ತಿರುವಾಗ ಗಡಿ ಭದ್ರತಾ ಪಡೆಯ ಗಸ್ತು ತಂಡ ತಡೆದರು. ಆ ವೇಳೆ ಕಳ್ಳಸಾಗಣೆದಾರರು ಸೈನಿಕರ ಮೇಲೆ ದಾಳಿ ನಡೆಸಿದರು. ಇದರಲ್ಲಿ 3 ಯೋಧರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವಾಗ ಕಳ್ಳಸಾಗಣೆದಾರರು ಸೈನಿಕರಿಂದ ಬಂದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಿದರೊ, ಆಗ ಓರ್ವ ಸೈನಿಕ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದನು. ಇದರಲ್ಲಿ ಮೊಹಮ್ಮದ್ ಅಲಮಿನ್ ಎಂಬ ಹೆಸರಿನ ಬಾಂಗ್ಲಾದೇಶದ ಕಳ್ಳಸಾಗಣೆದಾರ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಅವನ ಸಾವಾಗಿದೆ. “ಪರಿಸ್ಥಿತಿಯನ್ನು ಹತೋಟಿಗೆ ತರಲು ಗುಂಡಿನ ದಾಳಿ ನಡೆಸಬೇಕಾಯಿತು” ಎಂದು ಗಡಿ ಭದ್ರತಾ ಪಡೆಯು ತಿಳಿಸಿದೆ. ಈ ಕಳ್ಳಸಾಗಾಣಿಕೆದಾರ ಯಾರು? ಮತ್ತು ಅವರ ಜಾಲ ಎಲ್ಲಿಯವರೆಗೆ ಹರಡಿದೆ?, ಇದರ ತನಿಖೆ ಪೋಲಿಸರು ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಉದ್ದೇಶಪೂರ್ವಕವಾಗಿ ಇಂತಹ ಘಟನೆಗಳನ್ನು ಮಾಡಲಾಗುತ್ತಿದೆಯೇ?, ಇದರ ಅನ್ವೇಷಣೆ ಆಗಬೇಕಾಗಿದೆ! |
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !