|

ಸಿಪಹಿಜಾಲಾ (ತ್ರಿಪುರ) – ಸಿಪಹಿಜಾಲಾ ಜಿಲ್ಲೆಯಲ್ಲಿ ಅಂದಾಜು 20 ರಿಂದ 25 ಬಾಂಗ್ಲಾದೇಶಿ ಕಳ್ಳ ಸಾಗಾಣೆದಾರರು ಭಾರತದ ಗಡಿಯೊಳಗೆ ನುಸುಳುತ್ತಿರುವಾಗ ಗಡಿ ಭದ್ರತಾ ಪಡೆಯ ಗಸ್ತು ತಂಡ ತಡೆದರು. ಆ ವೇಳೆ ಕಳ್ಳಸಾಗಣೆದಾರರು ಸೈನಿಕರ ಮೇಲೆ ದಾಳಿ ನಡೆಸಿದರು. ಇದರಲ್ಲಿ 3 ಯೋಧರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವಾಗ ಕಳ್ಳಸಾಗಣೆದಾರರು ಸೈನಿಕರಿಂದ ಬಂದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಿದರೊ, ಆಗ ಓರ್ವ ಸೈನಿಕ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದನು. ಇದರಲ್ಲಿ ಮೊಹಮ್ಮದ್ ಅಲಮಿನ್ ಎಂಬ ಹೆಸರಿನ ಬಾಂಗ್ಲಾದೇಶದ ಕಳ್ಳಸಾಗಣೆದಾರ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಅವನ ಸಾವಾಗಿದೆ. “ಪರಿಸ್ಥಿತಿಯನ್ನು ಹತೋಟಿಗೆ ತರಲು ಗುಂಡಿನ ದಾಳಿ ನಡೆಸಬೇಕಾಯಿತು” ಎಂದು ಗಡಿ ಭದ್ರತಾ ಪಡೆಯು ತಿಳಿಸಿದೆ. ಈ ಕಳ್ಳಸಾಗಾಣಿಕೆದಾರ ಯಾರು? ಮತ್ತು ಅವರ ಜಾಲ ಎಲ್ಲಿಯವರೆಗೆ ಹರಡಿದೆ?, ಇದರ ತನಿಖೆ ಪೋಲಿಸರು ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಉದ್ದೇಶಪೂರ್ವಕವಾಗಿ ಇಂತಹ ಘಟನೆಗಳನ್ನು ಮಾಡಲಾಗುತ್ತಿದೆಯೇ?, ಇದರ ಅನ್ವೇಷಣೆ ಆಗಬೇಕಾಗಿದೆ! |
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine