ಹುಟ್ಟುಹಬ್ಬದ ನಿಮಿತ್ತ ಸ್ಟಾಲಿನ್ ಇವರ ಘೋಷಣೆ

ಚೆನ್ನೈ(ತಮಿಳುನಾಡು) – ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ ಇವರು ಮಾರ್ಚ 1 ರಂದು ತಮ್ಮ 72ನೇ ಹುಟ್ಟುಹಬ್ಬದ ದಿನದಂದು ‘ಹಿಂದಿ ಭಾಷಾ ಹೇರಿಕೆಯನ್ನು ವಿರೋಧಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ’, ಎಂದು ಘೋಷಿಸಿದರು. ದೇಶದ ತ್ರಿಭಾಷಾ ನೀತಿಯನ್ನು ವಿರೋಧಿಸಿ ಅವರು ಈ ಘೋಷಣೆ ಮಾಡಿದರು.
ಸ್ಟಾಲಿನ್ ಮಾತನಾಡುತ್ತಾ, ಕೇಂದ್ರ ಸರಕಾರ ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ನೀಡುವ ಹೆಸರಿನಡಿ ತ್ರಿಭಾಷಾ ನೀತಿಯನ್ನು ಜಾರಿಗೊಳಿಸಿದೆ. ನಿಜವಾಗಿಯೂ ಈ ನೀತಿಯೆಂದರೆ ಹಿಂದಿ ಭಾಷಿಕರಲ್ಲದ ರಾಜ್ಯಗಳಲ್ಲಿ ಹಿಂದಿ ಹೇರುವ ಷಡ್ಯಂತ್ರವಾಗಿದೆ. ಪಂಜಾಬ ಮತ್ತು ತೇಲಂಗಾಣ ಇವು ರಾಜ್ಯಭಾಷೆಯನ್ನು ಕಡ್ಡಾಯಗೊಳಿಸಿದ್ದರಿಂದ ಅವುಗಳನ್ನು ಅಭಿನಂದಿಸುತ್ತೇನೆ. ಎರಡೂ ರಾಜ್ಯಗಳು ಕೇಂದ್ರದ ಭಾಜಪ ಸರಕಾರದ ಸುಳ್ಳತನವನ್ನು ಬಹಿರಂಗಪಡಿಸಿದೆ. ಕೇಂದ್ರ ಸರಕಾರವು ಹೊಸ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ನೀತಿಯು `ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ನೀಡಲು’ ಮತ್ತು `ಅದರ ಪ್ರಸಾರ ಮಾಡಲು’ ಜಾರಿಗೊಳಿಸಲಾಗುತ್ತಿದೆಯೆಂದು ಹೇಳಿಕೊಳ್ಳುತ್ತಿದೆ ಎಂದರು.
ಸಂಪಾದಕೀಯ ನಿಲುವುರಾಜಕೀಯದ ಹೆಸರಿನಡಿಯಲ್ಲಿ ಭಾಷೆಯ ಆಧಾರದಲ್ಲಿ ದೇಶದಲ್ಲಿ ಪ್ರತ್ಯೇಕತೆಯ ಬೀಜವನ್ನು ಬಿತ್ತುವ ಒಂದು ರಾಜ್ಯದ ಮುಖ್ಯಮಂತ್ರಿಯಾಗಿರುವುದು ದೇಶದ ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆಯೆಂದು ಹೇಳಬೇಕು. ರಾಷ್ಟ್ರಹಿತದ ಕೇಂದ್ರ ಸರಕಾರವು ಇಂತಹವರ ಮೇಲೆ ಕ್ರಮ ಕೈಕೊಳ್ಳಲು ಮುಂದಡಿಯಿರುವುದು ಆವಶ್ಯಕವಾಗಿದೆ ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ