
ಪ್ರಯಾಗ್ ರಾಜ್ (ಉತ್ತರ ಪ್ರದೇಶ) – 2025 ರ ಪ್ರಯಾಗ್ ರಾಜ್ ಮಹಾಕುಂಭವು ಭವ್ಯ ಮತ್ತು ವೈಭವದಿಂದ ಆಚರಿಸಲಾಯಿತು. 144 ವರ್ಷಗಳ ನಂತರ ನಡೆದ ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮದಲ್ಲಿ 66 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದರು. ಕುಂಭಮೇಳದ ಆಡಳಿತ ಮಂಡಳಿಯು ಈ ಮಹಾಕಾರ್ಯಕ್ರಮದ ವೇಳೆ ಕಾಣೆಯಾಗಿದ್ದ 54,357 ಭಕ್ತರನ್ನು ಅವರ ಕುಟುಂಬಸ್ಥರೊಂದಿಗೆ ಮರಳಿ ಸೇರಿಸುವಲ್ಲಿ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರಕಾರದ ದೂರದೃಷ್ಟಿ ಮತ್ತು ಸಮರ್ಪಿತ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ಈ ಕಠಿಣ ಕಾರ್ಯದಲ್ಲಿ ರಾಜ್ಯ ಸರಕಾರವು ರಚಿಸಿದ ‘ಡಿಜಿಟಲ್ ಲಾಸ್ಟ್ ಅಂಡ್ ಫೌಂಡ್ ಸೆಂಟರ್’ ಅಂದರೆ ‘ಡಿಜಿಟಲ್ ಖೋಯಾ-ಪಾಯಾ ಕೇಂದ್ರ’ ದ ದೊಡ್ಡ ಕೊಡುಗೆಯಿದೆ.
ಅಂಕಿಅಂಶಗಳು ಈ ರೀತಿ ಇವೆ!
1. ಕಾಣೆಯಾಗಿದ್ದ ಭಕ್ತರು ಒಂದೇ ದಿನದಲ್ಲಿ ಪತ್ತೆಯಾದ ಸಂಖ್ಯೆ : ಕಾಣೆಯಾದ ಒಟ್ಟು 54,357 ಭಕ್ತರ ಪೈಕಿ 35 ಸಾವಿರಕ್ಕೂ ಹೆಚ್ಚು ಭಕ್ತರನ್ನು ಅದೇ ದಿನದಂದು ಕುಟುಂಬಸ್ಥರೊಂದಿಗೆ ಸೇರ್ಪಡೆ ಮಾಡಲಾಗಿದೆ.
2. ಮಕರ ಸಂಕ್ರಾಂತಿಯ ಅಮೃತಸ್ನಾನದ ಯಲ್ಲಿ(ಜನವರಿ 13-15): ಕಾಣೆಯಾಗಿದ್ದ 598 ಜನರು ತಮ್ಮ ಕುಟುಂಬವನ್ನು ಸೇರಿದ್ದಾರೆ.
3. ಮೌನಿ ಅಮವಾಸ್ಯೆಯ ಅವಧಿಯಲ್ಲಿ (ಜನವರಿ 28-30) : 8,725 ಜನರು ಹಾಗೂ
4. ವಸಂತ ಪಂಚಮಿಯ ಅವಧಿಯಲ್ಲಿ (ಫೆಬ್ರವರಿ 2-4) : ಕಾಣೆಯಾಗಿದ್ದ 864 ಜನರು ವಾಪಸ್ ತಮ್ಮ ಕುಟುಂಬವನ್ನು ಸೇರಿದ್ದಾರೆ.
ಸಂಪಾದಕೀಯ ನಿಲುವುಈ ಸಾಧನೆಗಾಗಿ ಯೋಗಿ ಆದಿತ್ಯನಾಥ್ ಸರಕಾರಕ್ಕೆ ಅಭಿನಂದನೆಗಳು! ‘ಗಂಗಾನದಿ ಅಶುದ್ಧವಾಗಿತ್ತು’, ‘ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದವು’, ಎಂದು ಹೇಳಿ ಉತ್ತರ ಪ್ರದೇಶ ಸರಕಾರವನ್ನು ಟೀಕಿಸುವವರು ಈಗ ಅವರ ಈ ಸಾಧನೆಯ ಬಗ್ಗೆ ಮಾತನಾಡುತ್ತಿಲ್ಲ ಏಕೆ ? |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ