|

ಮುಂಬಯಿ – ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಯಾರನ್ನೂ ಅವಮಾನಿಸಿಲ್ಲ. (ಛತ್ರಪತಿ ಸಂಭಾಜಿ ಮಹಾರಾಜರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ ಔರಂಗಜೇಬನನ್ನು ಹೊಗಳುವುದು ಛತ್ರಪತಿ ಸಂಭಾಜಿ ಮಹಾರಾಜರ ಜೊತೆಗೆ 110 ಕೋಟಿ ಹಿಂದೂ ಜನರ ಘೋರ ಅವಮಾನವಾಗಿದೆ! – ಸಂಪಾದಕರು) ನಾನು ಛತ್ರಪತಿ ಶಿವಾಜಿ ಮಹಾರಾಜರು, ಛತ್ರಪತಿ ಸಂಭಾಜಿ ಮಹಾರಾಜರು, ಡಾ. ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿಬಾ ಫುಲೆ, ರಾಜರ್ಷಿ ಶಾಹು ಮಹಾರಾಜರು ಈ ಎಲ್ಲಾ ಮಹಾನ್ ವ್ಯಕ್ತಿಗಳನ್ನು ಗೌರವಿಸುತ್ತೇನೆ. ಎಲ್ಲರೂ ಅವರನ್ನು ಗೌರವಿಸಬೇಕು. ಅವರನ್ನು ಆದರ್ಶವಾಗಿ ಪರಿಗಣಿಸಿ ಮುನ್ನಡೆಯಬೇಕು. ನಾನು ಔರಂಗಜೇಬನ ಬಗ್ಗೆ ನೀಡಿದ ಹೇಳಿಕೆಯನ್ನು ಇತಿಹಾಸಕಾರರು ನೀಡಿದ ಮಾಹಿತಿಯ ಆಧಾರದ ಮೇಲೆ ನೀಡಿದ್ದೆ; ಆದರೆ ಆ ಹೇಳಿಕೆಯಿಂದಾಗಿ ವಿಧಾನಸಭೆಯ ಕಲಾಪ ಮುಂದೂಡಬಾರದಿತ್ತು. ವಿಧಾನಸಭೆಯಲ್ಲಿ ನಾವು ಬಹಳಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ಜನರ ಕೆಲಸಗಳು ಬಾಕಿ ಇವೆ. ವಿಧಾನಸಭೆಯ ಕಲಾಪ ಸುಗಮವಾಗಿ ನಡೆಯಲು ನಾನು ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಸಮಾಜವಾದಿ ಪಕ್ಷದ ಶಾಸಕ ಅಬು ಆಜ್ಮಿ ನಾಚಿಕೆಗೇಡಿನ ಹೇಳಿಕೆ ನೀಡಿದ್ದಾರೆ. ಅವರು ‘ಔರಂಗಜೇಬ ಉತ್ತಮ ಆಡಳಿತಗಾರ’ ಎಂದು ಹೇಳಿಕೆ ನೀಡಿದ್ದರು. ಆ ಬಗ್ಗೆ ಅವರ ಮೇಲೆ ಟೀಕೆಗಳು ವ್ಯಕ್ತವಾಗಿವೆ ಮತ್ತು ರಾಜ್ಯ ಸರಕಾರದ ಬಜೆಟ್ ಅಧಿವೇಶನದಲ್ಲಿ ಗದ್ದಲ ಉಂಟಾಗಿ ಕಲಾಪ ಮುಂದೂಡಲಾಗಿತ್ತು.
ಸಂಪಾದಕೀಯ ನಿಲುವು‘ಕಳ್ಳನಿಗೊಂಡು ಪಿಳ್ಳೆನೆವ’ ಶಾಸಕ ಅಬು ಆಜ್ಮಿ ಅವರ ಹಳೆಯ ವೃತ್ತಿಯಾಗಿದೆ; ಆದರೆ ಅವರ ವಿರುದ್ಧ ಯಾವುದೇ ಸರಕಾರವೂ ಪರಿಣಾಮಕಾರಿ ಕ್ರಮ ಕೈಗೊಳ್ಳದ ಕಾರಣ ಅವರು ಈ ರೀತಿಯ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹವರ ಬಾಯಿ ಮುಚ್ಚಿಸಲು ಅವರ ವಿರುದ್ಧ ದೇಶದ್ರೋಹದ ಮೊಕದ್ದಮೆ ಹೂಡುವುದರ ಜೊತೆಗೆ ಔರಂಗಜೇಬನ ಗೋರಿಯನ್ನು ಕೆಡವಲು ಸರಕಾರ ಕ್ರಮ ಕೈಗೊಳ್ಳಬೇಕು. |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ