ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಸಂಸದ ಕಾಲಿಸೆಟ್ಟಿ ಅಪ್ಪಲನಾಯ್ಡು ಅವರ ಘೋಷಣೆ

ವಿಜಯನಗರಂ (ಆಂಧ್ರಪ್ರದೇಶ) – ಇಲ್ಲಿನ ತೆಲುಗು ದೇಶಂ ಪಕ್ಷದ ಸಂಸದ ಕಾಲಿಸೆಟ್ಟಿ ಅಪ್ಪಲನಾಯ್ಡು ಆಂಧ್ರಪ್ರದೇಶದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಯಾವುದೇ ಮಹಿಳೆ ಮೂರನೇ ಮಗುವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದರೆ, ಅವರಿಗೆ ತಮ್ಮ ಸಂಬಳದಿಂದ 50 ಸಾವಿರ ರೂಪಾಯಿ ನೀಡಲಾಗುವುದು, ಮತ್ತು ಗಂಡು ಮಗುವಾದರೆ ಹಸುವನ್ನು ನೀಡಲಾಗುವುದು” ಎಂದು ಘೋಷಿಸಿದರು.
1. ಸಂಸದ ಅಪ್ಪಲನಾಯ್ಡು ತಮ್ಮ ಘೋಷಣೆಯ ಬಗ್ಗೆ ಸ್ಪಷ್ಟನೆ ನೀಡುತ್ತಾ, “ಜನಸಂಖ್ಯೆ ಹೆಚ್ಚಳಕ್ಕೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ನಾಯ್ಡು ಅವರು ನೀಡಿರುವ ಕರೆ ಮತ್ತು ಅವರಿಬ್ಬರೂ ಮೂರನೇ ಮಗುವಿಗೆ ಜನ್ಮ ನೀಡುವ ಪ್ರಸ್ತಾಪ ನೀಡಿದ ನಂತರ, ನಾನು ಈ ಘೋಷಣೆ ಮಾಡಿದ್ದೇನೆ. ನಾವು ಮಹಿಳೆಯರಿಗೆ ಹೆಚ್ಚು ಮಕ್ಕಳನ್ನು ಹೆರಲು ಕರೆ ನೀಡುತ್ತಿದ್ದೇವೆ ಮತ್ತು ಮೂರನೇ ಮಗುವಿಗೆ ಜನ್ಮ ನೀಡಿದರೆ ಪ್ರೋತ್ಸಾಹಿಸುತ್ತೇವೆ” ಎಂದು ಹೇಳಿದರು.
2. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾರ್ಯಕ್ರಮವೊಂದರಲ್ಲಿ “ಎಲ್ಲಾ ಮಹಿಳಾ ಉದ್ಯೋಗಿಗಳಿಗೆ, ಅವರ ಮಕ್ಕಳ ಸಂಖ್ಯೆ ಎಷ್ಟೇ ಇದ್ದರೂ, ಹೆರಿಗೆ ರಜೆ ನೀಡಲಾಗುವುದು” ಎಂದು ಘೋಷಿಸಿದ್ದರು. ಇದರ ಮೂಲಕ ಮುಂದಿನ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ ಯುವಕರ ಸಂಖ್ಯೆಯನ್ನು ಹೆಚ್ಚಿಸಲು ಮಹಿಳೆಯರು ಸಾಧ್ಯವಾದಷ್ಟು ಮಕ್ಕಳನ್ನು ಹೆರಬೇಕು ಎಂಬ ಸಂದೇಶವನ್ನು ನೀಡಲಾಗಿದೆ.
ಸಂಪಾದಕೀಯ ನಿಲುವುಈ ಸಹಾಯ ಹಿಂದೂ ಮಹಿಳೆಯರಿಗೆ ನೀಡುತ್ತಾರೆಯೇ ಅಥವಾ ಇತರ ಧರ್ಮದವರಿಗೆ ನೀಡುತ್ತಾರೆಯೇ ಎಂಬುದನ್ನು ಸಂಸದರು ಸ್ಪಷ್ಟಪಡಿಸುವುದು ಅವಶ್ಯಕ; ಏಕೆಂದರೆ ಹೆಚ್ಚು ಮಕ್ಕಳನ್ನು ಯಾರು ಹೆರುತ್ತಾರೆಂದು ಬೇರೆ ಹೇಳಬೇಕಾಗಿಲ್ಲ! |
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !