
ನವದೆಹಲಿ – ಲೋಕಸಭೆಯಲ್ಲಿ ಏಪ್ರಿಲ್ 2 ರಂದು 12 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ನಂತರ ರಾತ್ರಿ 2.30ಕ್ಕೆ ವಕ್ಫ್ ಸುಧಾರಣಾ ಮಸೂದೆ ಅಂಗೀಕಾರಗೊಂಡಿತು. ರಾಜ್ಯಸಭೆಯಲ್ಲಿ ಏಪ್ರಿಲ್ 3 ರಂದು 12 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆಯ ನಂತರ ಈ ಮಸೂದೆ 128 ವಿರುದ್ಧ 95 ಮತಗಳಿಂದ ಅಂಗೀಕಾರವಾಯಿತು. ಈಗ ಈ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮೂ ಅವರಿಗೆ ಕಳುಹಿಸಲಾಗುವುದು. ರಾಷ್ಟ್ರಪತಿ ದ್ರೌಪದಿ ಮುರ್ಮೂ ಅವರು ಈ ಮಸೂದೆಗೆ ಸಹಿ ಹಾಕಿದ ನಂತರ, ಈ ಮಸೂದೆಯು ಕಾನೂನಾಗಿ ಪರಿವರ್ತನೆಯಾಗಲಿದೆ.
Waqf Amendment Bill Passed in Rajya Sabha at 2:30 AM!
“A significant moment in our efforts toward inclusive development!” – PM Modi
#WaqfAmendmentBill pic.twitter.com/HvNh6pWwKI
— Sanatan Prabhat (@SanatanPrabhat) April 4, 2025
ರಾಜ್ಯಸಭೆಯಲ್ಲಿ ರಾತ್ರಿ 2.30 ರ ನಂತರ ವಕ್ಫ್ ಸುಧಾರಣಾ ಮಸೂದೆ ಅಂಗೀಕಾರಗೊಂಡ ನಂತರವೂ ರಾಜ್ಯಸಭೆಯ ಕಲಾಪಗಳು ಬೆಳಿಗ್ಗೆ 4 ಗಂಟೆಯವರೆಗೆ ಮುಂದುವರೆಯಿತು. ನಂತರ ಅದನ್ನು ಮುಂದೂಡಲಾಯಿತು ಮತ್ತು ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಪುನಃ ಪ್ರಾರಂಭಿಸಲಾಯಿತು. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕಡ್ ಅವರು ಇದೊಂದು ಅಪರೂಪದ ಘಟನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಮಸೂದೆ ಅಂಗೀಕಾರವು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಪ್ರಯತ್ನದಲ್ಲಿ ಒಂದು ಮಹತ್ವದ ಕ್ಷಣವಾಗಿದೆ! – ಪ್ರಧಾನಿ ಮೋದಿ
संसद के दोनों सदनों से वक्फ (संशोधन) विधेयक और मुसलमान वक्फ (निरसन) विधेयक का पारित होना देश के लिए एक ऐतिहासिक क्षण है। यह सामाजिक-आर्थिक न्याय, पारदर्शिता और समावेशी विकास की हमारी सामूहिक प्रतिबद्धता को सामने लाता है। यह विशेष रूप से उन लोगों के लिए फायदेमंद होगा, जो लंबे समय…
— Narendra Modi (@narendramodi) April 4, 2025
ವಕ್ಫ್ ಸುಧಾರಣಾ ಮಸೂದೆ ಎರಡೂ ಸದನಗಳಲ್ಲಿ ಅಂಗೀಕಾರವಾದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿ, ‘ಸಂಸತ್ತಿನ ಎರಡೂ ಸದನಗಳು ವಕ್ಫ್ ಸುಧಾರಣಾ ಮಸೂದೆಯನ್ನು ಅಂಗೀಕರಿಸುವುದು ಸಾಮಾಜಿಕ, ಆರ್ಥಿಕ ನ್ಯಾಯ, ಪಾರದರ್ಶಕತೆ ಮತ್ತು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯ ಪ್ರಯತ್ನದಲ್ಲಿ ಒಂದು ಮಹತ್ವದ ಕ್ಷಣವಾಗಿದೆ. ಈ ಮಸೂದೆಯು ವಿಶೇಷವಾಗಿ ದೀರ್ಘಕಾಲದಿಂದ ಮೂಲೆಗುಂಪಾದ ಜನರಿಗೆ ಸಹಾಯಕವಾಗಲಿದೆ. ದಶಕಗಳಿಂದ ವಕ್ಫ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯ ಕೊರತೆಯಿತ್ತು. ಇದರಿಂದ ವಿಶೇಷವಾಗಿ ಮುಸ್ಲಿಂ ಮಹಿಳೆಯರು, ಬಡ ಮುಸ್ಲಿಮರು, ಮುಸ್ಲಿಮರ ಹಿತಕ್ಕೆ ಹಾನಿಯಾಗಿದೆ. ಸಂಸತ್ತು ಅಂಗೀಕರಿಸಿದ ಕಾನೂನುಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತವೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸುತ್ತವೆ. ಸಂಸದೀಯ ಸಮಿತಿಯ ಚರ್ಚೆಯಲ್ಲಿ ಭಾಗವಹಿಸಿದ ಮತ್ತು ತಮ್ಮ ದೃಷ್ಟಿಕೋನವನ್ನು ಮಂಡಿಸಿದ ಹಾಗೂ ಕಾನೂನುಗಳನ್ನು ಬಲಪಡಿಸಲು ಕೊಡುಗೆ ನೀಡಿದ ಎಲ್ಲಾ ಸಂಸದೀಯ ಸದಸ್ಯರಿಗೆ ಧನ್ಯವಾದಗಳು.
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
ಸ್ವದೇಶವೇ ಸರ್ವಸ್ವ !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!