ಬೆಂಗಳೂರು – ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರುವ ಸಮಯ ಬಂದಿದೆ. ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆ ಎಂಬ ಸಂವಿಧಾನದ ಮೂಲಭೂತ ಆದರ್ಶಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವುದು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ನ್ಯಾಯಾಲಯ ಹೇಳಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಹಂಚತೆ ಸಂಜೀವ ಕುಮಾರ ಅವರ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಸ್ಲಿಂ ಮಹಿಳೆ ಶಹನಾಜ್ ಬೇಗಂ ಅವರ ಮರಣದನಂತರ ಆಕೆಯ ಆಸ್ತಿ ವಿಭಜನೆಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಇದರಲ್ಲಿ ಮಹಿಳೆಯ ಪತಿ ಮತ್ತು ಆಕೆಯ ಸಹೋದರರು ಪ್ರತಿವಾದಿಗಳಾಗಿದ್ದರು. ವಿವಿಧ ಧಾರ್ಮಿಕ ಕಾನೂನುಗಳ ಅಡಿಯಲ್ಲಿ ಮಹಿಳೆಯರ ಹಕ್ಕುಗಳಲ್ಲಿ ದೊಡ್ಡ ವ್ಯತ್ಯಾಸವಿದೆ ಎಂದು ನ್ಯಾಯಾಲಯವು ಗಮನಿಸಿದೆ, ಇದು ಸಮಾನತೆಯ ಸಾಂವಿಧಾನಿಕ ತತ್ವವನ್ನು ಉಲ್ಲಂಘಿಸುತ್ತದೆ.
1. ಡಾ. ಭೀಮರಾವ ಅಂಬೇಡ್ಕರ್, ಸರ್ದಾರ್ ಪಟೇಲ್, ಡಾ. ರಾಜೇಂದ್ರ ಪ್ರಸಾದ್ ಮತ್ತು ಮೌಲಾನಾ ಹಸರತ್ ಮೊಹಾನಿಯಂತಹ ಸಂವಿಧಾನ ರಚಿಸುವವರ ಆಲೋಚನೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಹಂಚತೆ ಸಂಜೀವ ಕುಮಾರ, ಸಮಾನದ ಕಾನೂನು ಮಾತ್ರ ನಿಜವಾದ ಪ್ರಜಾಪ್ರಭುತ್ವದ ಅಡಿಪಾಯವನ್ನು ಹಾಕಬಲ್ಲದು ಎಂದು ಹೇಳಿದರು.
2. ಸಂವಿಧಾನದ 44 ನೇ ವಿಧಿಯಲ್ಲಿ ಸಮಾನ ನಾಗರಿಕ ಸಂಹಿತೆಯ ಉಲ್ಲೇಖವಿದೆ ಮತ್ತು ಅದನ್ನು ಕಾರ್ಯಗತಗೊಳಿಸುವ ಮೂಲಕ ಮಾತ್ರ ನಾಗರಿಕರಿಗೆ ಸಮಾನತೆ ಮತ್ತು ನ್ಯಾಯವನ್ನು ಖಾತರಿಪಡಿಸಬಹುದು ಎಂದು ನ್ಯಾಯಮೂರ್ತಿ ಕುಮಾರ ಹೇಳಿದರು. ಅವರು ವಿಶೇಷವಾಗಿ ಮಹಿಳೆಯರ ಅಸಮಾನ ಸ್ಥಿತಿಯ ಬಗ್ಗೆ ಬೆಳಕು ಚೆಲ್ಲಿದರು. ಧರ್ಮ ಆಧಾರಿತ ವೈಯಕ್ತಿಕ ಕಾನೂನುಗಳಿಂದಾಗಿ ಮಹಿಳೆಯರನ್ನು ಇನ್ನೂ ಸಮಾನ ಹಕ್ಕುಗಳಿಂದ ವಂಚಿತರನ್ನಾಗಿ ಮಾಡಲಾಗಿದೆ. ಉದಾಹರಣೆಗೆ, ಹಿಂದೂ ಉತ್ತರಾಧಿಕಾರ ಕಾಯಿದೆಯ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಸಮಾನ ಹಕ್ಕುಗಳು ಲಭಿಸಿದರೆ, ಮುಸ್ಲಿಂ ಕಾನೂನಿನ ಪ್ರಕಾರ ಸಹೋದರಿಯರು ತಮ್ಮ ಸಹೋದರರಿಗಿಂತ ಕಡಿಮೆ ಆಸ್ತಿಯನ್ನು ಪಡೆಯುತ್ತಾರೆ.
3. ಗೋವಾ ಮತ್ತು ಉತ್ತರಾಖಂಡ ರಾಜ್ಯಗಳು ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಿವೆ. ಈಗ ಅದನ್ನು ಇಡೀ ದೇಶದಲ್ಲಿ ಜಾರಿಗೊಳಿಸುವ ಸಮಯ ಬಂದಿದೆ, ಎಂದು ನ್ಯಾಯಾಲಯ ಹೇಳಿದೆ.
4. ಕೇಂದ್ರ ಮತ್ತು ಕರ್ನಾಟಕ ಸರಕಾರಗಳ ಪ್ರಧಾನ ಕಾನೂನು ಕಾರ್ಯದರ್ಶಿಗಳಿಗೆ ಕರ್ನಾಟಕ ಹೈಕೋರ್ಟ್ ತನ್ನ ತೀರ್ಪಿನ ಪ್ರತಿಯನ್ನು ಕಳುಹಿಸುವಂತೆ ಆದೇಶಿಸಿದೆ, ಇದರಿಂದ ಅವರು ಅದರ ಬಗ್ಗೆ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು.
“Time to implement the Uniform Civil Code (UCC) in the country” — Karnataka High Court
Justice Sanjeevkumar underscores the UCC as essential to uphold constitutional values: equality, justice, and secularism.
The court also highlighted the unequal treatment of women under… pic.twitter.com/CX9kr8ch4L
— Sanatan Prabhat (@SanatanPrabhat) April 6, 2025