|

ನವದೆಹಲಿ – ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡ ನಂತರ, ರಾಷ್ಟ್ರಪತಿ ದ್ರೌಪದಿ ಮುರ್ಮೂ ಅವರು ವಕ್ಫ್ ಸುಧಾರಣೆ ಮಸೂದೆಗೆ ಸಮ್ಮತಿ ನೀಡಿದ್ದಾರೆ. ಕೇಂದ್ರ ಸರಕಾರವು ಹೊಸ ಕಾನೂನಿನ ಕುರಿತು ಗೆಜೆಟ್ ಅಧಿಸೂಚನೆಯನ್ನು ಪ್ರಸಾರ ಮಾಡಿದೆ. ಈಗ ಕೇಂದ್ರ ಸರಕಾರವು ಈ ಕಾನೂನಿನ ಅನುಷ್ಠಾನದ ದಿನಾಂಕದ ಕುರಿತು ಪ್ರತ್ಯೇಕ ಅಧಿಸೂಚನೆಯನ್ನು ಪ್ರಸಾರ ಮಾಡಲಿದೆ.
ಮತ್ತೊಂದೆಡೆ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್, ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಸಂಸದ ಅಸಾದುದ್ದೀನ್ ಓವೈಸಿ ಮತ್ತು ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರು ಈ ಕಾನೂನನ್ನು ಪ್ರತ್ಯೇಕ ಅರ್ಜಿಗಳಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ವಕ್ಫ್ ಸುಧಾರಣೆ ಕಾನೂನು ಮುಸ್ಲಿಮರ ಬಗ್ಗೆ ತಾರತಮ್ಯ ಮಾಡುತ್ತದೆ ಮತ್ತು ಅವರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!