Muslims Attack Manipur BJP Leader : ಮಣಿಪುರದಲ್ಲಿ ಸಾವಿರಾರು ಮುಸ್ಲಿಮರಿಂದ ಭಾಜಪ ನಾಯಕನ ಮನೆ ಧ್ವಂಸಗೊಳಿಸಿ ಬೆಂಕಿ ಇಟ್ಟರು!

ವಕ್ಫ್ ಸುಧಾರಣಾ ಕಾಯ್ದೆಗೆ ಬೆಂಬಲ ನೀಡಿದ ನಂತರದ ಘಟನೆ

ಇಂಫಾಲ (ಮಣಿಪುರ) – ಮಣಿಪುರದಲ್ಲೂ ವಕ್ಫ್ ಸುಧಾರಣಾ ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯದ ಥೌಬಲ ಜಿಲ್ಲೆಯ ಲಿಲೋಂಗ್‌ನಲ್ಲಿ ಮುಸ್ಲಿಮರಿಂದ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಿಂದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 102 ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು. ಕೆಲವು ಕಡೆ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆಗಳು ನಡೆದವು. ಈ ವೇಳೆ ಭಾಜಪ ಅಲ್ಪಸಂಖ್ಯಾತ ಮೋರ್ಚಾದ ಮಣಿಪುರ ಘಟಕದ ಅಧ್ಯಕ್ಷ ಅಸ್ಕರ್ ಅಲಿ ಅವರ ಮನೆಯನ್ನು ಮುಸ್ಲಿಂ ಪ್ರತಿಭಟನಾಕಾರರು ಧ್ವಂಸಗೊಳಿಸಿ ಬೆಂಕಿ ಹಚ್ಚಿದರು. ಅಸ್ಕರ್ ಅಲಿ ಅವರು ವಕ್ಫ್ ಸುಧಾರಣಾ ಕಾಯ್ದೆಗೆ ಬೆಂಬಲ ನೀಡಿದ್ದರು. ಈ ಘಟನೆಯ ನಂತರ ಅಲಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊವನ್ನು ಪ್ರಸಾರ ಮಾಡಿ ಕಾನೂನನ್ನು ಬೆಂಬಲಿಸಿದ್ದಕ್ಕಾಗಿ ಕ್ಷಮೆಯಾಚಿಸಿದರು. ಇಂಫಾಲ ಪೂರ್ವದ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲೂ ಪ್ರತಿಭಟನೆಗಳು ನಡೆದವು.

ಸಂಪಾದಕೀಯ ನಿಲುವು

  • ದೇಶದಲ್ಲಿ ಕಾನೂನುಗಳನ್ನು ಉಲ್ಲಂಘಿಸಿ ಬಹಿರಂಗವಾಗಿ ಹಿಂಸಾಚಾರ ಮಾಡುವ ಮುಸ್ಲಿಮರು! ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೇಶದ ಒಬ್ಬನೇ ಒಬ್ಬ ಜಾತ್ಯತೀತವಾದಿ ರಾಜಕೀಯ ಪಕ್ಷ ಮತ್ತು ಅದರ ನಾಯಕರು ಒತ್ತಾಯಿಸುವುದಿಲ್ಲ; ಏಕೆಂದರೆ ಆಕ್ರಮಣ ಮಾಡುವವರು ಮುಸ್ಲಿಮರಾಗಿದ್ದಾರೆ!
  • ರಾಜಕೀಯ ಪಕ್ಷಗಳಿಂದ ಆಗಾಗ ಅರಿವಿಗೆ ತಂದ ಅದೇ ಸಂವಿಧಾನವನ್ನು ಗಾಳಿಗೆ ತೂರುವ ಗಲಭೆಕೋರ ಮುಸ್ಲಿಮರು !