
ಶ್ರೀನಗರ (ಜಮ್ಮು- ಕಾಶ್ಮೀರ) – ವಕ್ಫ್ ತಿದ್ದುಪಡಿ ಕಾಯಿದೆಯ ಕುರಿತು ಜಮ್ಮು-ಕಾಶ್ಮೀರದ ವಿಧಾನಸಭೆಯಲ್ಲಿ ಗದ್ದಲ ಉಂಟಾಯಿತು. ನ್ಯಾಷನಲ್ ಕಾನ್ಫರೆನ್ಸ್ ನ ಶಾಸಕರೊಬ್ಬರು ಸದನದಲ್ಲಿ ಕಾನೂನಿನ ಪ್ರತಿಯನ್ನು ಹರಿದು ಹಾಕಿದರು. ಇತರ ಪಕ್ಷಗಳು ವಕ್ಫ್ ಕಾಯಿದೆಯ ವಿರುದ್ಧ ನಿರ್ಣಯ ತರುವ ಬಗ್ಗೆ ಚರ್ಚಿಸಿದ್ದವು. ಈ ಗದ್ದಲದಿಂದಾಗಿ ಸದನದ ಕಲಾಪಗಳನ್ನು ಸ್ಥಗಿತಗೊಳಿಸಲಾಯಿತು.
ಮತ್ತೊಂದೆಡೆ, ವಕ್ಫ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯವು ಅನುಮತಿಸಿದೆ. ಈವರೆಗೆ ಸುಪ್ರೀಂ ಕೋರ್ಟ್ನಲ್ಲಿ 6 ಅರ್ಜಿಗಳ ಸಲ್ಲಿಕೆಯಾಗಿದೆ. ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಏಪ್ರಿಲ್ 11 ರಿಂದ ದೇಶಾದ್ಯಂತ ಪ್ರತಿಭಟನೆಗಳನ್ನು ಮಾಡುವುದಾಗಿ ಘೋಷಿಸಿದೆ.
ಸಂಪಾದಕೀಯ ನಿಲುವುಕಾನೂನಿನ ಪ್ರತಿಯನ್ನು ಹರಿದು ಹಾಕುವುದರಿಂದ ಆ ಕಾನೂನು ರದ್ದಾಗುವುದಿಲ್ಲ ಎಂಬುದೂ ತಿಳಿದಿಲ್ಲದವರನ್ನು ಜನತೆಯು ಆಯ್ಕೆ ಮಾಡುತ್ತದೆ, ಇದು ಜನತೆಗೆ ನಾಚಿಕೆಗೇಡಿನ ಸಂಗತಿ ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ