ತೃಣಮೂಲ ಕಾಂಗ್ರೆಸ್ ಸಂಸದ ಬಾಪಿ ಹಲದರ ಅವರಿಂದ ಬೆದರಿಕೆ

ಕೋಲಕಾತಾ/ನವದೆಹಲಿ – ವಕ್ಫ್ ಮಂಡಳಿಯ ಆಸ್ತಿಯ ಮೇಲೆ ಮುಸಲ್ಮಾನರಿಗೆ ಹಕ್ಕಿದೆ. ಯಾರಾದರೂ ಈ ಆಸ್ತಿಗಳ ಮೇಲೆ ಕಣ್ಣಿಟ್ಟರೆ, ಅವರ ಕಣ್ಣುಗಳನ್ನು ಕಿತ್ತುಹಾಕಲಾಗುವುದು. ಅವರ ಕೈಕಾಲುಗಳನ್ನು ಕೂಡ ಮುರಿಯಲಾಗುತ್ತದೆ ಎಂದು ಬಂಗಾಳದ ಮಥುರಾಪುರ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಸಂಸದ ಬಾಪಿ ಹಲದರ ಸಭೆಯಲ್ಲಿ ಬೆದರಿಕೆ ಒಡ್ಡಿದ್ದಾರೆ. ‘ರಾಜ್ಯದ ವಕ್ಫ್ ಮಂಡಳಿಯ ಆಸ್ತಿಗಳನ್ನು ರಕ್ಷಿಸುವುದು ನನ್ನ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜವಾಬ್ದಾರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.
ಹೇಳಿಕೆಯನ್ನು ತಪ್ಪು ಎಂದು ಹೇಳಿದ ‘ಜಮಿಯತ್ ಉಲೇಮಾ-ಎ-ಹಿಂದ್’ !

ಜಮಿಯತ್ ಉಲೇಮಾ-ಎ-ಹಿಂದ್ನ ಕಾರ್ಯದರ್ಶಿ ಮೌಲಾನಾ ನಿಯಾಜ್ ಫಾರೂಕಿ ಸಂಸದ ಹಲದರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡಿ, ಅವರು ಸರಿಯಾದ ಭಾಷೆಯನ್ನು ಬಳಸಬೇಕು. ಕಣ್ಣುಗಳನ್ನು ಕಿತ್ತುಹಾಕುವುದರ ಅರ್ಥವೇನು? ಹಾಗೆ ಮಾಡಲು ಯಾರಿಗೂ ಹಕ್ಕಿಲ್ಲ. ಅವರು ಹಾಗೆ ಹೇಳಿದ್ದರೆ, ಅದು ಸಂಪೂರ್ಣವಾಗಿ ತಪ್ಪು. ಬಂಗಾಳದ ಮುರ್ಷಿದಾಬಾದ್ನಲ್ಲಿ ವಕ್ಫ್ ಕಾನೂನಿನ ವಿರುದ್ಧ ನಡೆದ ಹಿಂಸಾಚಾರಕ್ಕೆ ಅಲ್ಲಿನ ಸರಕಾರವೇ ಹೊಣೆಯಾಗಿದೆ. ಎಲ್ಲಿಯಾದರೂ ಪ್ರತಿಭಟನೆ ನಡೆದರೆ, ಅದು ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿಯಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇವರು ಜವಾಬ್ದಾರರಾಗಿದ್ದಾರೆ. ಈ ಕಾರಣದಿಂದಲೇ ಅಲ್ಲಿ ಕೇಂದ್ರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ, ಎಂದು ಹೇಳಿದೆ.
ಸಂಪಾದಕೀಯ ನಿಲುವು
|
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !