ಪಾಕಿಸ್ತಾನವು ಭಾರತದ ಬದಲು ತನ್ನದೇ ದೇಶದ ಅಲ್ಪಸಂಖ್ಯಾತರ ಸ್ಥಿತಿಗತಿಯ ಬಗ್ಗೆ ಗಮನ ನೀಡಬೇಕು!

ವಕ್ಫ್ ಕಾನೂನಿನ ಬಗ್ಗೆ ಹೇಳಿಕೆ ನೀಡಿದ ಪಾಕಿಸ್ತಾನ: ಕಿವಿ ಹಿಂಡಿದ ಭಾರತ!

ನವದೆಹಲಿ – ಭಾರತದ ಆಂತರಿಕ ವ್ಯವಹಾರಗಳ ಬಗ್ಗೆ ಪ್ರತಿಕ್ರಿಯಿಸಲು ನೆರೆಯ ದೇಶಕ್ಕೆ ಯಾವುದೇ ಹಕ್ಕಿಲ್ಲ. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಬಯಸಿದರೆ, ಪಾಕಿಸ್ತಾನವು ಇತರರಿಗೆ ಉಪದೇಶ ಮಾಡುವ ಬದಲು ತನ್ನದೇ ಆದ ಕೆಟ್ಟ ಕಾರ್ಯಕ್ಷಮತೆಯನ್ನು ನೋಡಬೇಕು, ಎಂದು ವಕ್ಫ್ ತಿದ್ದುಪಡಿ ಕಾಯಿದೆಯ ಬಗ್ಗೆ ಭಾರತವನ್ನು ಟೀಕಿಸಿದ್ದಕ್ಕಾಗಿ ಪಾಕಿಸ್ಥಾನವನ್ನು ಖಂಡಿಸಿದೆ. ಪಾಕಿಸ್ತಾನದ ಹೇಳಿಕೆ ಆಧಾರರಹಿತ ಮತ್ತು ನಿಷ್ಪ್ರಯೋಜಕ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ ಮುಸ್ಲಿಮರ ವಿರುದ್ಧವಾಗಿದೆ ಎಂದು ಪಾಕಿಸ್ತಾನಿ ಪತ್ರಿಕೆಗಳು ಹೇಳಿದ್ದವು.