ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ
ಶ್ರೀ ಸಿದ್ದಲಿಂಗ ಸ್ವಾಮೀಜಿ
ಕಲಬುರಗಿ(ಕರ್ನಾಟಕ) – ಆಂದೋಲ ಎಂಬಲ್ಲಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಮು ದ್ವೇಷವನ್ನು ಹರಡುವ ಪ್ರಚೋದನಕಾರಿ ಭಾಷಣ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸ್ವಾಮೀಜಿ ವಿರುದ್ಧ ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶರಣು ಪಾಟೀಲ್ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಏಪ್ರಿಲ್ 15 ರಂದು ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದಲ್ಲಿ ಶ್ರೀರಾಮೋತ್ಸವ ಸಮಿತಿಯು ಆಯೋಜಿಸಿದ್ದ ಶ್ರೀರಾಮನವಮಿ ಉತ್ಸವದ ಸಂದರ್ಭದಲ್ಲಿ ಆಂದೋಲ ಎಂಬಲ್ಲಿ ಸಿದ್ಧಲಿಂಗ ಸ್ವಾಮೀಜಿ ಕೋಮು ದ್ವೇಷವನ್ನು ಹರಡುವ ಭಾಷಣ ಮಾಡಿದರು ಎಂದು ಆರೋಪಿಸಲಾಗಿದೆ.
ಸಂಪಾದಕೀಯ ನಿಲುವುಹಿಂದೂ ದೇವರು, ಧರ್ಮಗ್ರಂಥಗಳು, ಸಂತರು ಮುಂತಾದವರ ಅವಮಾನದ ಸಮಯದಲ್ಲಿ ಪೊಲೀಸರ ಈ ತತ್ಪರತೆ ಎಲ್ಲಿಗೆ ಹೋಗುತ್ತದೆ? |