Karnataka CET Row : ಸಿ.ಇ.ಟಿ. ಪರೀಕ್ಷೆಗೂ ಮುನ್ನ ವಿದ್ಯಾರ್ಥಿಯ ಜನಿವಾರವನ್ನು ತೆಗೆಸಿದ ಅಧಿಕಾರಿ ಅಮಾನತು

(ಸಿ.ಇ.ಟಿ. ಎಂದರೆ ಸಾಮಾನ್ಯ ಪ್ರವೇಶ ಪರೀಕ್ಷೆ)

ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ – ತೀರ್ಥಹಳ್ಳಿಯಲ್ಲಿನ ಆದಿಚುಂಚನಗಿರಿ ಮಹಾವಿದ್ಯಾಲಯದಲ್ಲಿ ಸಿ.ಇ.ಟಿ. ಪರೀಕ್ಷೆ ಬರೆಯಲು ಬಂದಿದ್ದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣದಲ್ಲಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯ ಬಗ್ಗೆ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಈ ಘಟನೆಯ ನಂತರ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸಂಬಂಧಪಟ್ಟ ಅಧಿಕಾರಿಯನ್ನು ತಕ್ಷಣವೇ ಅಮಾನತುಗೊಳಿಸುವಂತೆ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದ ಜಿಲ್ಲಾಧಿಕಾರಿಗೆ ಆದೇಶ ನೀಡಿದ್ದಾರೆ.

ಸಂಪಾದಕೀಯ ನಿಲುವು

ಅಧಿಕಾರಿಗಳು ಓರ್ವ ಮುಸ್ಲಿಂ ವಿದ್ಯಾರ್ಥಿಯ ತಲೆಯ ಮೇಲಿರುವ ದುಂಡನೆಯ ಟೋಪಿ ತೆಗೆಸುವ ಧೈರ್ಯ ತೋರಿಸುವರೇ?