ಪಾಕಿಸ್ತಾನದಲ್ಲಿ ಹಿಂದೂ ರಾಜ್ಯ ಸಚಿವರ ಬೆಂಗಾವಲು ವಾಹನದ ಮೇಲೆ ಆಲೂಗಡ್ಡೆ ಎಸೆತ!

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹೊಸ ಕಾಲುವೆಗಳ ಯೋಜನೆಗಳನ್ನು ವಿರೋಧಿಸುತ್ತಿರುವ ಪ್ರತಿಭಟನಾಕಾರರು ಧಾರ್ಮಿಕ ವ್ಯವಹಾರಗಳ ರಾಜ್ಯ ಸಚಿವ ಖೈಲ ದಾಸ ಕೊಹಿಸ್ತಾನಿ ಅವರ ಬೆಂಗಾವಲು ವಾಹನದ ಮೇಲೆ ಟೊಮೆಟೊ ಮತ್ತು ಆಲೂಗಡ್ಡೆಗಳನ್ನು ಎಸೆದರು. ಈ ಸಮಯದಲ್ಲಿ, ಪ್ರತಿಭಟನಾಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಈ ಘಟನೆ ಥಟ್ಟಾ ಜಿಲ್ಲೆಯಲ್ಲಿ ನಡೆದಿದೆ. ಇದರಲ್ಲಿ ಕೊಹಿಸ್ತಾನಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಈ ಘಟನೆಯ ನಂತರ, ಪ್ರಧಾನಿ ಶೆಹಬಾಜ್ ಷರೀಫ್ ಅವರು ಕೊಹಿಸ್ತಾನಿ ಅವರಿಗೆ ದೂರವಾಣಿ ಕರೆ ಮಾಡಿ ಘಟನೆಯ ಸಂಪೂರ್ಣ ತನಿಖೆ ನಡೆಸುವುದಾಗಿ ಭರವಸೆ ನೀಡಿದರು. ಜನಪ್ರತಿನಿಧಿಗಳ ಮೇಲಿನ ದಾಳಿ ಅಸಹನೀಯವಾಗಿದೆ ಎಂದು ಪ್ರಧಾನಿ ಹೇಳಿದರು. ಈ ಘಟನೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು, ಎಂದು ಹೇಳಿದರು.

ಸಿಂಧ ಪ್ರಾಂತದ ಮುಖ್ಯಮಂತ್ರಿ ಸಯ್ಯದ್ ಮುರಾದ್ ಅಲಿ ಶಾ ಅವರು ಸಹ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ದಾಳಿಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸುವಂತೆ ಅವರು ಪೊಲೀಸ್ ಉಪ ಮಹಾನಿರೀಕ್ಷಕರಿಗೆ ಆದೇಶಿಸಿದರು.

ಸಂಪಾದಕೀಯ ನಿಲುವು

ಪಾಕಿಸ್ತಾನದಲ್ಲಿ ಸಾಮಾನ್ಯ ಹಿಂದೂಗಳಾಗಲಿ ಅಥವಾ ಸಚಿವರಾಗಲಿ, ಅವರನ್ನು ಇದೇ ರೀತಿ ಅವಮಾನಿಸಲಾಗುತ್ತದೆ ಎಂಬುದನ್ನು ತಿಳಿಯಿರಿ!