ನೂರಾರು ಜನರು ನಿರಾಶ್ರಿತರಾದರು
ಶ್ರೀನಗರ (ಜಮ್ಮು- ಕಾಶ್ಮೀರ) – ಈ ಬೇಸಿಗೆಯಲ್ಲಿ ಜಮ್ಮು- ಕಾಶ್ಮೀರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ರಾಂಬನ್ ಜಿಲ್ಲೆಯ ಸೆರಿ ಬಗ್ನಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆಯಿಂದ ನೂರಾರು ನಿವಾಸಿಗಳು ನಿರಾಶ್ರಿತರಾಗಿದ್ದಾರೆ. ಅನೇಕ ಸ್ಥಳಗಳಲ್ಲಿ ಭೂಕುಸಿತ ಉಂಟಾದ್ದರಿಂದ ರಾಷ್ಟ್ರೀಯ ಹೆದ್ದಾರಿಗಳು ಮುಚ್ಚಲ್ಪಟ್ಟಿವೆ. ಈ ಸಂದರ್ಭದಲ್ಲಿ ಹವಾಮಾನ ಇಲಾಖೆಯು ಮೊದಲೇ ಎಚ್ಚರಿಕೆ ನೀಡಿತ್ತು. ಶ್ರೀನಗರಕ್ಕೆ ಹೋಗುವ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇಲ್ಲಿ ಇನ್ನೂ ಧಾರಾಕಾರ ಮಳೆ ಬೀಳುತ್ತಿದೆ.