
ಬೆಂಗಳೂರು – ಭಾರತೀಯ ಇತಿಹಾಸದ ಮಹಾನ ಆಡಳಿತಗಾರ ವಿಜಯನಗರದ ಸಾಮ್ರಾಟ ರಾಜ ಕೃಷ್ಣದೇವರಾಯ ಅವರ ಸಮಾಧಿಯನ್ನು ಮಾಂಸ ಮಾರಾಟ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಕನ್ನಡ ನಾಡಿನ ಪ್ರಸಿದ್ಧ ರಾಜ, ಅಸಾಮಾನ್ಯ ಆಡಳಿತಗಾರ ಮತ್ತು ಅದ್ವಿತೀಯ ಸೇನಾನಿಯಾಗಿದ್ದ ರಾಜಾ ಕೃಷ್ಣದೇವರಾಯರಿಗೆ ಇದು ಅವಮಾನ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರತಿಕ್ರಿಯಿಸಿದ್ದಾರೆ. ಯತ್ನಾಳ ಅವರು ‘ಎಕ್ಸ್’ನಲ್ಲಿ ಮಾಡಿದ ‘ಪೋಸ್ಟ್’ನಲ್ಲಿ, ‘ಹಿಂದೂಗಳ ದೇವಾಲಯಗಳನ್ನು ಕೆಡವಿ ದೇಶದ ಸಂಪತ್ತನ್ನು ಲೂಟಿ ಮಾಡಿದ ಮತ್ತು ಸಾವಿರಾರು ಹಿಂದೂಗಳನ್ನು ಕ್ರೂರವಾಗಿ ಕೊಲೆ ಮಡಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆಯು ತೆರಿಗೆದಾರರ ಹಣದಿಂದ ರಕ್ಷಿಸುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಮಹಾಪರಾಕ್ರಮಿ, ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳ ಪೋಷಕ ರಾಜ ಕೃಷ್ಣದೇವರಾಯರ ಸಮಾಧಿಯ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯವೇಕೆ? ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ. ಮಾಂಸ ಮಾರಾಟ ಮಾಡಿ ಸಮಾಧಿಯ ಪಾವಿತ್ರ್ಯವನ್ನು ಹಾಳು ಮಾಡುತ್ತಿರುವವರನ್ನು ಜಿಲ್ಲಾಡಳಿತವು ತಕ್ಷಣವೇ ಅಲ್ಲಿಂದ ತೆರವುಗೊಳಿಸಬೇಕು. ಹಾಗೆಯೇ ಸರಕಾರವು ತಕ್ಷಣವೇ ಸ್ವಚ್ಛತೆ ಮಾಡಿ ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡಬೇಕು’ ಎಂದು ಶಾಸಕ ಯತ್ನಾಳ ಆಗ್ರಹಿಸಿದ್ದಾರೆ.
ಸಂಪಾದಕೀಯ ನಿಲುವುರಾಜ ಕೃಷ್ಣದೇವರಾಯರ ವಿಜಯನಗರ ಸಾಮ್ರಾಜ್ಯವು ಶ್ರೇಷ್ಠ ಸಾಮ್ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗಿತ್ತು. ಕರ್ನಾಟಕದ ಹಾಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಇದರ ಅರಿವು ಮತ್ತು ತಿಳಿವಳಿಕೆ ಇಲ್ಲದಿರುವುದು ಮತ್ತು ರಾಜರ ಸಮಾಧಿಯು ಮಾಂಸ ಮಾರಾಟ ಕೇಂದ್ರವಾಗಿ ಬದಲಾಗಿರುವುದರಲ್ಲಿ ಆಶ್ಚರ್ಯವೇನಲ್ಲ. ಇಂತಹ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ತರಬೇಕು! |
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ