
ಬೆಂಗಳೂರು – ಭಾರತೀಯ ಇತಿಹಾಸದ ಮಹಾನ ಆಡಳಿತಗಾರ ವಿಜಯನಗರದ ಸಾಮ್ರಾಟ ರಾಜ ಕೃಷ್ಣದೇವರಾಯ ಅವರ ಸಮಾಧಿಯನ್ನು ಮಾಂಸ ಮಾರಾಟ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಕನ್ನಡ ನಾಡಿನ ಪ್ರಸಿದ್ಧ ರಾಜ, ಅಸಾಮಾನ್ಯ ಆಡಳಿತಗಾರ ಮತ್ತು ಅದ್ವಿತೀಯ ಸೇನಾನಿಯಾಗಿದ್ದ ರಾಜಾ ಕೃಷ್ಣದೇವರಾಯರಿಗೆ ಇದು ಅವಮಾನ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರತಿಕ್ರಿಯಿಸಿದ್ದಾರೆ. ಯತ್ನಾಳ ಅವರು ‘ಎಕ್ಸ್’ನಲ್ಲಿ ಮಾಡಿದ ‘ಪೋಸ್ಟ್’ನಲ್ಲಿ, ‘ಹಿಂದೂಗಳ ದೇವಾಲಯಗಳನ್ನು ಕೆಡವಿ ದೇಶದ ಸಂಪತ್ತನ್ನು ಲೂಟಿ ಮಾಡಿದ ಮತ್ತು ಸಾವಿರಾರು ಹಿಂದೂಗಳನ್ನು ಕ್ರೂರವಾಗಿ ಕೊಲೆ ಮಡಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆಯು ತೆರಿಗೆದಾರರ ಹಣದಿಂದ ರಕ್ಷಿಸುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಮಹಾಪರಾಕ್ರಮಿ, ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳ ಪೋಷಕ ರಾಜ ಕೃಷ್ಣದೇವರಾಯರ ಸಮಾಧಿಯ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯವೇಕೆ? ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ. ಮಾಂಸ ಮಾರಾಟ ಮಾಡಿ ಸಮಾಧಿಯ ಪಾವಿತ್ರ್ಯವನ್ನು ಹಾಳು ಮಾಡುತ್ತಿರುವವರನ್ನು ಜಿಲ್ಲಾಡಳಿತವು ತಕ್ಷಣವೇ ಅಲ್ಲಿಂದ ತೆರವುಗೊಳಿಸಬೇಕು. ಹಾಗೆಯೇ ಸರಕಾರವು ತಕ್ಷಣವೇ ಸ್ವಚ್ಛತೆ ಮಾಡಿ ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡಬೇಕು’ ಎಂದು ಶಾಸಕ ಯತ್ನಾಳ ಆಗ್ರಹಿಸಿದ್ದಾರೆ.
ಸಂಪಾದಕೀಯ ನಿಲುವುರಾಜ ಕೃಷ್ಣದೇವರಾಯರ ವಿಜಯನಗರ ಸಾಮ್ರಾಜ್ಯವು ಶ್ರೇಷ್ಠ ಸಾಮ್ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗಿತ್ತು. ಕರ್ನಾಟಕದ ಹಾಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಇದರ ಅರಿವು ಮತ್ತು ತಿಳಿವಳಿಕೆ ಇಲ್ಲದಿರುವುದು ಮತ್ತು ರಾಜರ ಸಮಾಧಿಯು ಮಾಂಸ ಮಾರಾಟ ಕೇಂದ್ರವಾಗಿ ಬದಲಾಗಿರುವುದರಲ್ಲಿ ಆಶ್ಚರ್ಯವೇನಲ್ಲ. ಇಂತಹ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ತರಬೇಕು! |
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ