|

ಪಹಲ್ಗಾಮ್ (ಜಮ್ಮು-ಕಾಶ್ಮೀರ) – ಇಲ್ಲಿನ ಬೈಸರಣ ಪ್ರವಾಸಿ ತಾಣದ ಪ್ರದೇಶದಲ್ಲಿ ಏಪ್ರಿಲ್ ೨೨ ರಂದು ಮಧ್ಯಾಹ್ನ ಸುಮಾರು ಎರಡೂವರೆ ಗಂಟೆಗೆ ಜಿಹಾದಿ ಭಯೋತ್ಪಾದಕರು ಹಿಂದೂ ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ೧೨ ಜನರು ಗಾಯಗೊಂಡಿದ್ದಾರೆ. ಅಂತಹ ಅಧಿಕೃತ ಮಾಹಿತಿ ನೀಡಲಾಗಿದ್ದರೂ, ಸಾವನ್ನಪ್ಪಿದವರ ಸಂಖ್ಯೆ ೨೭ ಕ್ಕಿಂತ ಹೆಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಈ ಪ್ರವಾಸಿಗರು ಕುದುರೆ ಸವಾರಿ ಮಾಡುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಈ ಗುಂಡಿನ ದಾಳಿಯಲ್ಲಿ ಸ್ಥಳೀಯ ೩ ಜನರು ಮತ್ತು ಅವರ ಕುದುರೆಗಳಿಗೂ ಗಾಯಗಳಾಗಿವೆ. ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
🚨 #Pahalgam Terror Attack: Terror hits Kashmir with brutal force 💥
• LeT offshoot claims responsibility
• Tourist killed after confirming his identity
• Several injured – Death toll likely to mount
• PM Modi & HM Amit Shah: “Perpetrators will not be spared.”
🇵🇰 As long… pic.twitter.com/grNWPjE88N
— Sanatan Prabhat (@SanatanPrabhat) April 22, 2025
‘ಭಯೋತ್ಪಾದಕರು ಪ್ರವಾಸಿಗರ ಹೆಸರನ್ನು ಕೇಳಿ ಅವರು ಹಿಂದೂಗಳೆಂದು ತಿಳಿದ ನಂತರವೇ ಅವರ ಮೇಲೆ ಗುಂಡಿನ ದಾಳಿ ನಡೆಸಿದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಮತ್ತು ಸೇನಾ ಪಡೆಗಳು ಇಲ್ಲಿ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ನಡೆಸುತ್ತಿವೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ‘ದಿ ರೆಸಿಸ್ಟೆನ್ಸ್ ಫೋರ್ಸ್’ (ಟಿಆರ್ಎಫ್) ಎಂಬ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದೆ.

ಈ ದಾಳಿಯ ಪರಿಣಾಮ ಅಮರನಾಥ ಯಾತ್ರೆಯ ಮೇಲೆ ಉಂಟಾಗುವ ಸಾಧ್ಯತೆ ಇದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಪೊಲೀಸ್ ಮಹಾನಿರ್ದೇಶಕ ಎಸ್.ಪಿ. ವೈದ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.
ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ!

ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಪ್ರಸ್ತುತ ೪ ದಿನಗಳ ಭಾರತ ಪ್ರವಾಸದಲ್ಲಿದ್ದಾರೆ, ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ ೨೨ ರಿಂದ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಕಾಶ್ಮೀರದ ಕಡೆಗೆ ವಿಶ್ವದ ಗಮನ ಸೆಳೆಯಲು ಪಾಕಿಸ್ತಾನವು ಉದ್ದೇಶಪೂರ್ವಕವಾಗಿ ಈ ದಾಳಿಯನ್ನು ನಡೆಸಿದೆ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಎಂದಿಗೂ ದಾಳಿ ಮಾಡುವುದಿಲ್ಲ; ಏಕೆಂದರೆ ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗ ದೊರೆಯುತ್ತದೆ. ಹೀಗಿದ್ದರೂ, ಈ ದಾಳಿಯನ್ನು ಉದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಹೇಯ ಕೃತ್ಯದ ಹಿಂದಿರುವವರನ್ನು ಬಿಡುವುದಿಲ್ಲ! – ಪ್ರಧಾನಮಂತ್ರಿ ಮೋದಿ

ಸೌದಿ ಅರೇಬಿಯಾದ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ಮೋದಿ ಅವರು ಈ ದಾಳಿಯ ಕುರಿತು ‘ಎಕ್ಸ್’ ನಲ್ಲಿ ಪ್ರತಿಕ್ರಿಯಿಸುತ್ತಾ, ‘ಈ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವಿದೆ. ಈ ಹೇಯ ಕೃತ್ಯದ ಹಿಂದಿರುವವರನ್ನು ಬಿಡುವುದಿಲ್ಲ. ಅವರ ದುಷ್ಟ ಉದ್ದೇಶಗಳು ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ನಿರ್ಧಾರ ಅಚಲವಾಗಿದೆ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ’ ಎಂದು ಹೇಳಿದ್ದಾರೆ.
I strongly condemn the terror attack in Pahalgam, Jammu and Kashmir. Condolences to those who have lost their loved ones. I pray that the injured recover at the earliest. All possible assistance is being provided to those affected.
Those behind this heinous act will be brought…
— Narendra Modi (@narendramodi) April 22, 2025
ಅಮಿತ್ ಶಾ ಶ್ರೀನಗರಕ್ಕೆ ತಲುಪಿದರು!
ಪ್ರಧಾನಮಂತ್ರಿ ಮೋದಿ ಅವರು ಸೌದಿ ಅರೇಬಿಯಾದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದರು ಮತ್ತು ಅವರಿಗೆ ಸೂಚನೆಗಳನ್ನು ನೀಡಿದರು.
Anguished by the terror attack on tourists in Pahalgam, Jammu and Kashmir. My thoughts are with the family members of the deceased. Those involved in this dastardly act of terror will not be spared, and we will come down heavily on the perpetrators with the harshest consequences.…
— Amit Shah (@AmitShah) April 22, 2025
ಇದಾದ ನಂತರ ಅಮಿತ್ ಶಾ ಅವರು ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದರು ಮತ್ತು ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಿದರು.
೬ ಭಯೋತ್ಪಾದಕರು ಭಾಗಿಯಾಗಿದ್ದ ಮಾಹಿತಿ
ಈ ಭಯೋತ್ಪಾದಕ ದಾಳಿಯಲ್ಲಿ ೬ ಭಯೋತ್ಪಾದಕರು ಭಾಗಿಯಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಭಯೋತ್ಪಾದಕರು ಕಾಶ್ಮೀರಿಗಳಲ್ಲ ಮತ್ತು ಅವರು ವಿದೇಶಿಯರು ಎಂಬ ಮಾಹಿತಿಯೂ ಲಭ್ಯವಾಗುತ್ತಿದೆ. ಭಯೋತ್ಪಾದಕರು ಸ್ವಯಂಚಾಲಿತ ರೈಫಲ್ಗಳಿಂದ ಸುಮಾರು ೧೦ ರಿಂದ ೧೫ ನಿಮಿಷಗಳ ಕಾಲ ಗುಂಡಿನ ದಾಳಿ ನಡೆಸಿದರು. ಇದರಲ್ಲಿ ನೂರಾರು ಗುಂಡುಗಳನ್ನು ಹಾರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಗುಂಡಿನ ದಾಳಿಯ ನಂತರ ೨ ಸಾವಿರಕ್ಕೂ ಹೆಚ್ಚು ಪ್ರವಾಸಿಗರ ಭಯದಿಂದ ಓಡಿಹೋದರು!
ಯಾವ ಸ್ಥಳದಲ್ಲಿ ಭಯೋತ್ಪಾದಕ ದಾಳಿ ನಡೆಯಿತೋ, ಆ ಸಮಯದಲ್ಲಿ ಅಲ್ಲಿ ೨ ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಉಪಸ್ಥಿತರಿದ್ದರು. ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಎಲ್ಲರೂ ಓಡಿಹೋದರು. ಇದರಲ್ಲಿ ಕೆಲವರು ಗಾಯಗೊಂಡರು. ಹಾಗೆಯೇ ಒಬ್ಬ ವ್ಯಕ್ತಿಗೆ ಹೃದಯಾಘಾತವೂ ಆಯಿತು. ಇಲ್ಲಿನ ಭದ್ರತಾ ಪಡೆಗಳು ಗಾಯಗೊಂಡವರೆಲ್ಲರನ್ನು ರಕ್ಷಣೆಯೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂಪಾದಕೀಯ ನಿಲುವು
|
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ