J-K Hindu Tourists Attacked : ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲೆ ಜಿಹಾದಿ ಭಯೋತ್ಪಾದಕರ ದಾಳಿ

  • ೨೭ ಜನರು ಸಾವನ್ನಪ್ಪಿರುವ ಸಾಧ್ಯತೆ

  • ಪ್ರವಾಸಿಗರ ಹೆಸರು ಕೇಳಿ ಗುಂಡಿಕ್ಕಿದರು

ಪಹಲ್ಗಾಮ್ (ಜಮ್ಮು-ಕಾಶ್ಮೀರ) – ಇಲ್ಲಿನ ಬೈಸರಣ ಪ್ರವಾಸಿ ತಾಣದ ಪ್ರದೇಶದಲ್ಲಿ ಏಪ್ರಿಲ್ ೨೨ ರಂದು ಮಧ್ಯಾಹ್ನ ಸುಮಾರು ಎರಡೂವರೆ ಗಂಟೆಗೆ ಜಿಹಾದಿ ಭಯೋತ್ಪಾದಕರು ಹಿಂದೂ ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ೧೨ ಜನರು ಗಾಯಗೊಂಡಿದ್ದಾರೆ. ಅಂತಹ ಅಧಿಕೃತ ಮಾಹಿತಿ ನೀಡಲಾಗಿದ್ದರೂ, ಸಾವನ್ನಪ್ಪಿದವರ ಸಂಖ್ಯೆ ೨೭ ಕ್ಕಿಂತ ಹೆಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಈ ಪ್ರವಾಸಿಗರು ಕುದುರೆ ಸವಾರಿ ಮಾಡುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಈ ಗುಂಡಿನ ದಾಳಿಯಲ್ಲಿ ಸ್ಥಳೀಯ ೩ ಜನರು ಮತ್ತು ಅವರ ಕುದುರೆಗಳಿಗೂ ಗಾಯಗಳಾಗಿವೆ. ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

‘ಭಯೋತ್ಪಾದಕರು ಪ್ರವಾಸಿಗರ ಹೆಸರನ್ನು ಕೇಳಿ ಅವರು ಹಿಂದೂಗಳೆಂದು ತಿಳಿದ ನಂತರವೇ ಅವರ ಮೇಲೆ ಗುಂಡಿನ ದಾಳಿ ನಡೆಸಿದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೊಲೀಸರು ಮತ್ತು ಸೇನಾ ಪಡೆಗಳು ಇಲ್ಲಿ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ನಡೆಸುತ್ತಿವೆ. ಈ ಭಯೋತ್ಪಾದಕ ದಾಳಿಯ ಹೊಣೆಯನ್ನು ‘ದಿ ರೆಸಿಸ್ಟೆನ್ಸ್ ಫೋರ್ಸ್’ (ಟಿಆರ್‌ಎಫ್) ಎಂಬ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದೆ.

ಈ ದಾಳಿಯ ಪರಿಣಾಮ ಅಮರನಾಥ ಯಾತ್ರೆಯ ಮೇಲೆ ಉಂಟಾಗುವ ಸಾಧ್ಯತೆ ಇದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಪೊಲೀಸ್ ಮಹಾನಿರ್ದೇಶಕ ಎಸ್.ಪಿ. ವೈದ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ!

ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಪ್ರಸ್ತುತ ೪ ದಿನಗಳ ಭಾರತ ಪ್ರವಾಸದಲ್ಲಿದ್ದಾರೆ, ಮತ್ತು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ ೨೨ ರಿಂದ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ, ಕಾಶ್ಮೀರದ ಕಡೆಗೆ ವಿಶ್ವದ ಗಮನ ಸೆಳೆಯಲು ಪಾಕಿಸ್ತಾನವು ಉದ್ದೇಶಪೂರ್ವಕವಾಗಿ ಈ ದಾಳಿಯನ್ನು ನಡೆಸಿದೆ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಎಂದಿಗೂ ದಾಳಿ ಮಾಡುವುದಿಲ್ಲ; ಏಕೆಂದರೆ ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗ ದೊರೆಯುತ್ತದೆ. ಹೀಗಿದ್ದರೂ, ಈ ದಾಳಿಯನ್ನು ಉದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಹೇಯ ಕೃತ್ಯದ ಹಿಂದಿರುವವರನ್ನು ಬಿಡುವುದಿಲ್ಲ! – ಪ್ರಧಾನಮಂತ್ರಿ ಮೋದಿ

ಸೌದಿ ಅರೇಬಿಯಾದ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ಮೋದಿ ಅವರು ಈ ದಾಳಿಯ ಕುರಿತು ‘ಎಕ್ಸ್’ ನಲ್ಲಿ ಪ್ರತಿಕ್ರಿಯಿಸುತ್ತಾ, ‘ಈ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವಿದೆ. ಈ ಹೇಯ ಕೃತ್ಯದ ಹಿಂದಿರುವವರನ್ನು ಬಿಡುವುದಿಲ್ಲ. ಅವರ ದುಷ್ಟ ಉದ್ದೇಶಗಳು ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ನಿರ್ಧಾರ ಅಚಲವಾಗಿದೆ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ’ ಎಂದು ಹೇಳಿದ್ದಾರೆ.

ಅಮಿತ್ ಶಾ ಶ್ರೀನಗರಕ್ಕೆ ತಲುಪಿದರು!

ಪ್ರಧಾನಮಂತ್ರಿ ಮೋದಿ ಅವರು ಸೌದಿ ಅರೇಬಿಯಾದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಸಂಪರ್ಕಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದರು ಮತ್ತು ಅವರಿಗೆ ಸೂಚನೆಗಳನ್ನು ನೀಡಿದರು.

ಇದಾದ ನಂತರ ಅಮಿತ್ ಶಾ ಅವರು ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದರು ಮತ್ತು ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಿದರು.

೬ ಭಯೋತ್ಪಾದಕರು ಭಾಗಿಯಾಗಿದ್ದ ಮಾಹಿತಿ

ಈ ಭಯೋತ್ಪಾದಕ ದಾಳಿಯಲ್ಲಿ ೬ ಭಯೋತ್ಪಾದಕರು ಭಾಗಿಯಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಭಯೋತ್ಪಾದಕರು ಕಾಶ್ಮೀರಿಗಳಲ್ಲ ಮತ್ತು ಅವರು ವಿದೇಶಿಯರು ಎಂಬ ಮಾಹಿತಿಯೂ ಲಭ್ಯವಾಗುತ್ತಿದೆ. ಭಯೋತ್ಪಾದಕರು ಸ್ವಯಂಚಾಲಿತ ರೈಫಲ್‌ಗಳಿಂದ ಸುಮಾರು ೧೦ ರಿಂದ ೧೫ ನಿಮಿಷಗಳ ಕಾಲ ಗುಂಡಿನ ದಾಳಿ ನಡೆಸಿದರು. ಇದರಲ್ಲಿ ನೂರಾರು ಗುಂಡುಗಳನ್ನು ಹಾರಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಗುಂಡಿನ ದಾಳಿಯ ನಂತರ ೨ ಸಾವಿರಕ್ಕೂ ಹೆಚ್ಚು ಪ್ರವಾಸಿಗರ ಭಯದಿಂದ ಓಡಿಹೋದರು!

ಯಾವ ಸ್ಥಳದಲ್ಲಿ ಭಯೋತ್ಪಾದಕ ದಾಳಿ ನಡೆಯಿತೋ, ಆ ಸಮಯದಲ್ಲಿ ಅಲ್ಲಿ ೨ ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಉಪಸ್ಥಿತರಿದ್ದರು. ಭಯೋತ್ಪಾದಕರು ಅವರ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಎಲ್ಲರೂ ಓಡಿಹೋದರು. ಇದರಲ್ಲಿ ಕೆಲವರು ಗಾಯಗೊಂಡರು. ಹಾಗೆಯೇ ಒಬ್ಬ ವ್ಯಕ್ತಿಗೆ ಹೃದಯಾಘಾತವೂ ಆಯಿತು. ಇಲ್ಲಿನ ಭದ್ರತಾ ಪಡೆಗಳು ಗಾಯಗೊಂಡವರೆಲ್ಲರನ್ನು ರಕ್ಷಣೆಯೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಂಪಾದಕೀಯ ನಿಲುವು

  • ಪಾಕಿಸ್ತಾನ ಮತ್ತು ಕಾಶ್ಮೀರದಲ್ಲಿನ ಜಿಹಾದಿ ಮನಸ್ಥಿತಿಯ ಮತಾಂಧ ಮುಸಲ್ಮಾನರಿಗೆ ತಕ್ಕ ಪಾಠ ಕಲಿಸದೆ ಕಾಶ್ಮೀರದಲ್ಲಿನ ಜಿಹಾದಿ ಭಯೋತ್ಪಾದನೆ ಎಂದಿಗೂ ಕೊನೆಗೊಳ್ಳುವುದಿಲ್ಲ, ಇದು ವಾಸ್ತವ. ಈ ಕಡೆಗೆ ನಿರ್ಲಕ್ಷ್ಯ ವಹಿಸುವವರೆಗೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ!
  • ಜಿಹಾದಿ ಭಯೋತ್ಪಾದಕ ದಾಳಿಯನ್ನು ಮುಸಲ್ಮಾನರು, ಕಾಂಗ್ರೆಸ್ಸಿಗರು, ಸಮಾಜವಾದಿಗಳು, ಪ್ರಗತಿಪರರು ಎಂದಿಗೂ ಖಂಡಿಸುವುದಿಲ್ಲ ಎಂಬುದನ್ನು ಗಮನಿಸಿ!