ಮಂಗಳೂರು – ಜಮ್ಮು-ಕಾಶ್ಮೀರದ ಪಹಲ್ಗಾಮನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯನ್ನು ಬೆಂಬಲಿಸುವ ಫೇಸ್ಬುಕ್ನಲ್ಲಿ ಒಂದು ಪೋಸ್ಟ ಪ್ರಸಾರ ಮಾಡಲಾಗಿದೆ. ಈ ಬಗ್ಗೆ ಮಂಗಳೂರಿನ ಕೋಣಾಜೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ ಕುಮಾರ ಈ ಬಗ್ಗೆ ದೂರು ದಾಖಲಿಸಿದ್ದಾರೆ. ‘2023 ರಲ್ಲಿ ಮಹಾರಾಷ್ಟ್ರದ ಪಾಲ್ಘರನಲ್ಲಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಲಾಗಿತ್ತು. ಪಾಲ್ಘರ ಘಟನೆಯಿಂದ ಕಾಶ್ಮೀರದಲ್ಲಿ ಧರ್ಮವನ್ನು ವಿಚಾರಿಸಿ ಭಯೋತ್ಪಾದಕರು ಹತ್ಯೆ ಮಾಡಿದರು’ ಎನ್ನುವ ಬರಹವನ್ನು ಪ್ರಸಾರ ಮಾಡಲಾಗಿದೆ. ಈ ಪೋಸ್ಟ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳನ್ನು ಹುಡುಕಿ ಪಾಕಿಸ್ತಾನಕ್ಕೆ ಅಟ್ಟಬೇಕು! |